ETV Bharat / city

ಅರಣ್ಯಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು: 20 ಹೆಕ್ಟೇರ್​ನಷ್ಟು ಅರಣ್ಯ ಪ್ರದೇಶ ಅಗ್ನಿಗಾಹುತಿ

author img

By

Published : Mar 4, 2021, 12:37 PM IST

ನಾಗರಹೊಳೆ ಅರಣ್ಯದ ಅಂತರಸಂತೆ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ ಎಂದು ಅರಣ್ಯಾಧಿಕಾರಿ ಮಹೇಶ್​ ಮಾಹಿತಿ ನೀಡಿದ್ದಾರೆ.

fire in forest
ಅರಣ್ಯ ಪ್ರದೇಶ ನಾಶ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ 20 ಹೆಕ್ಟೇರ್​ನಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ ಎಂದು ಅರಣ್ಯಾಧಿಕಾರಿ ಮಹೇಶ್ ತಿಳಿಸಿದ್ದಾರೆ.

ಅರಣ್ಯಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ನಿರ್ದೇಶಕ ಮಹೇಶ್ ಅವರು ವಿಡಿಯೋ ಮೂಲಕ ಹೇಳಿಕೆ ನೀಡಿದ್ದು, ನಾಗರಹೊಳೆ ಅರಣ್ಯದ ಅಂತರಸಂತೆ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಕಿಡಿಗೇಡಿಗಳು ಹಚ್ಚಿದ್ದರು. ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದರು.

ಸುಮಾರು 20 ಹೆಕ್ಟೇರ್ ನಷ್ಟು ಅರಣ್ಯ ಬೆಂಕಿಗಾಹುತಿಯಾಗಿದೆ ಎಂದು ಮಹೇಶ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.