ETV Bharat / city

Mysuru gang rape case: ಸಂತ್ರಸ್ತೆ ಯಾವುದೇ ಹೇಳಿಕೆ ನೀಡಿಲ್ಲ: ಆರಗ ಜ್ಞಾನೇಂದ್ರ

author img

By

Published : Aug 27, 2021, 9:26 AM IST

ಸಾಮೂಹಿಕ ಅತ್ಯಾಚಾರ​ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯಾವುದೇ ಹೇಳಿಕೆ ನೀಡಿಲ್ಲ. ಈ ಕುರಿತು ಪ್ರಾಮಾಣಿಕವಾಗಿ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮೈಸೂರಿನಲ್ಲಿ ತಿಳಿಸಿದ್ದಾರೆ.

Home Minister Araga Jnanendra
ಆರಗ ಜ್ಞಾನೇಂದ್ರ

ಮೈಸೂರು: ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿದೆ. ಈ ಕುರಿತು ಪ್ರಾಮಾಣಿಕವಾಗಿ ತನಿಖೆ ನಡೆಯುತ್ತಿದೆ. ಖಂಡಿತವಾಗಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ

ಇದನ್ನೂ ಓದಿ: ಸಂತ್ರಸ್ತೆ ಯಾರ ಜೊತೆಯೂ ಮಾತನಾಡುವ ಸ್ಥಿತಿಯಲ್ಲಿಲ್ಲ: ಸಚಿವೆ ಶಶಿಕಲಾ ಜೊಲ್ಲೆ

ಈ​ ಪ್ರಕರಣ ಕುರಿತು ಈಗ ನಾನು ಏನೂ ಹೇಳಲಾರೆ, ತನಿಖೆಗೆ ಅಡಚಣೆ ಆಗುತ್ತದೆ. ಮೈಸೂರು ಕಾನೂನು ಸುವ್ಯವಸ್ಥೆ ಬಗ್ಗೆ ಇಂದು ಸಭೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಮೈಸೂರು Gangrape Case: ನೇರವಾಗಿ ತಮಗೆ ವರದಿ ಮಾಡುವಂತೆ ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.