ETV Bharat / city

ಜೆಡಿಎಸ್ ದಳಪತಿಗಳಿಂದ ಮೈಸೂರು ರೌಂಡ್ಸ್.. ಸಾರ್ವತ್ರಿಕ ಚುನಾವಣಾ ಅಖಾಡಕ್ಕೆ ತಾಲೀಮು..

author img

By

Published : Apr 24, 2022, 12:28 PM IST

ಈಗಾಗಲೇ ಜನತಾ ಜಲಧಾರೆ ರಥಯಾತ್ರೆ ಮೂಲಕ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ಚುರುಕುಗೊಳಿಸಿರುವ ಜೆಡಿಎಸ್​ನ ವರಿಷ್ಠರು ಇದೀಗ ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ..

H.D.Devegowda and H.D.Kumaraswamy
ಮಾಜಿ ಪ್ರಧಾನಿ ಹೆಚ್​ಡಿಡಿ ಹಾಗೂ ಮಾಜಿ ಸಿಎಂ ಹೆಚ್​ಡಿಕೆ

ಮೈಸೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಧ್ಯಾಹ್ನ 12.50ಕ್ಕೆ ತಿ.ನರಸೀಪುರ‌ ತಾಲೂಕಿನ ಜೆಡಿಎಸ್ ಕಚೇರಿಗೆ ಭೇಟಿ ನೀಡಿ, ನಂತರ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ಜನತಾ ಜಲಧಾರೆ ರಥಯಾತ್ರೆಗೆ ಚಾಲನೆ‌ ನೀಡಲಿದ್ದಾರೆ.

ಶ್ರೀ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಬಳಿ ವೇದಿಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಕೆ.ಆರ್.ನಗರಕ್ಕೆ ಭೇಟಿ ನೀಡುವರು‌. ನಂತರ ಸಂಜೆ 6 ಗಂಟೆಗೆ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಮಿಲನ್ ಪಂಕ್ಷನ್ ಹಾಲ್​ನಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸಲಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಕೂಡ ಪಾಲ್ಗೊಳ್ಳಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠಗೊಳಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಜನತಾ ಜಲದಾರೆ ರಥಯಾತ್ರೆ ಮೂಲಕ ಸಾರ್ವತ್ರಿಕ ಚುನಾವಣೆಗೆ ಸಿದ್ದತೆ ಚುರುಕುಗೊಳಿಸಿದೆ‌.

ಕಳೆದ ವಾರವಷ್ಟೇ ಬನ್ನೂರಿನಲ್ಲಿ ರೋಡ್ ಶೋನಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಭಾಗವಹಿಸಿದ್ದರು. ಇಂದು ನರಸೀಪುರಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡ ಆಗಮಿಸುತ್ತಿದ್ದಾರೆ. ದೇವೇಗೌಡರಿಗೆ ಅದ್ದೂರಿ ಸ್ವಾಗತ ಕೋರಲು ಜೆಡಿಎಸ್ ಕಾರ್ಯಕರ್ತರಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಅನಿವಾರ್ಯವಾದರೆ ಸರ್ಕಾರ ಬುಲ್ಡೋಜರ್ ಪ್ರಯೋಗವನ್ನು ಕಾಯ್ದೆ ಮೂಲಕ ತರಲಿ: ಕಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.