ETV Bharat / city

ಹೆಚ್.ವಿಶ್ವನಾಥ್​ ನಾಮನಿರ್ದೇಶನ ರದ್ದುಗೊಳಿಸುವಂತೆ ರಾಜ್ಯಪಾಲರಿಗೆ ಸಾ.ರಾ.ಮಹೇಶ್​ ಪತ್ರ

author img

By

Published : Jul 25, 2020, 4:48 PM IST

ಶುಕ್ರವಾರ ಹೆಚ್.ವಿಶ್ವನಾಥ್ ಅವರನ್ನು ವಿಧಾನ ಪರಿಷತ್​ಗೆ ನಾಮನಿರ್ದೇಶನ ಮಾಡಿರುವುದು ಸುಪ್ರೀಂಕೋರ್ಟ್​ ತೀರ್ಪಿಗೆ ವಿರುದ್ಧವಾಗಿದೆ. ಹೀಗಾಗಿ ಅವರ ನಾಮನಿರ್ದೇಶನ ಮಾಡಿರುವ ಆದೇಶವನ್ನು ರದ್ದುಗೊಳಿಸಿ ಎಂದು ಶಾಸಕ ಸಾ.ರಾ.ಮಹೇಶ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

Jds Mla sara mahesh letter to Governor
ಹೆಚ್.ವಿಶ್ವನಾಥ್​ ನಾಮನಿರ್ದೇಶನ ರದ್ದುಗೊಳಿಸುವಂತೆ ರಾಜ್ಯಪಾಲರಿಗೆ ಸಾ.ರಾ.ಮಹೇಶ್​ ಪತ್ರ

ಮೈಸೂರು: ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿ ಹೆಚ್.ವಿಶ್ವನಾಥ್ ಅವರನ್ನು ವಿಧಾನ ಪರಿಷತ್​ಗೆ ನಾಮನಿರ್ದೇಶನ ಮಾಡಿರುವ ಆದೇಶವನ್ನು ರದ್ದುಗೊಳಿಸಿ ಎಂದು ಶಾಸಕ ಸಾ.ರಾ.ಮಹೇಶ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಹೆಚ್.ವಿಶ್ವನಾಥ್​ ನಾಮನಿರ್ದೇಶನ ರದ್ದುಗೊಳಿಸುವಂತೆ ರಾಜ್ಯಪಾಲರಿಗೆ ಸಾ.ರಾ.ಮಹೇಶ್​ ಪತ್ರ

ಕೆ.ಆರ್.ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ (ಶುಕ್ರವಾರ) ಹೆಚ್.ವಿಶ್ವನಾಥ್ ಅವರನ್ನು ವಿಧಾನ ಪರಿಷತ್​ಗೆ ನಾಮನಿರ್ದೇಶನ ಮಾಡಿರುವುದು ಸುಪ್ರೀಂಕೋರ್ಟ್​ ತೀರ್ಪಿಗೆ ವಿರುದ್ಧವಾಗಿದೆ.

ಹೀಗಾಗಿ ರಾಜ್ಯಪಾಲರು ಅವರ ನಾಮನಿರ್ದೇಶನ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯಪಾಲರು, ಸರ್ಕಾರದ ಅಡ್ವೋಕೇಟ್ ಜನರಲ್, ವಿಧಾನ ಪರಿಷತ್ ಸಭಾಪತಿಗಳು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.