ಎಲ್ಲ ಧಾರ್ಮಿಕ ಕೇಂದ್ರಗಳ ರಕ್ಷಣೆಗೆ ಸರ್ಕಾರ ಬದ್ಧ: ಸಚಿವೆ ಶಶಿಕಲಾ ಜೊಲ್ಲೆ

author img

By

Published : Sep 26, 2021, 12:26 PM IST

Updated : Sep 26, 2021, 12:53 PM IST

shashikala jolle

ಎಲ್ಲ ಧರ್ಮದ ಧಾರ್ಮಿಕ ಕೇಂದ್ರಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಮೈಸೂರು: ನಂಜನಗೂಡಿನ ಹುಚ್ಚಗಣಿ ಗ್ರಾಮದ ಮಹದೇವಮ್ಮ ದೇವಾಲಯ ತೆರವು ಪ್ರಕರಣ ಸರ್ಕಾರದ ಗಮನಕ್ಕೆ ಬಾರದೇ ಆಗಿದೆ. ಈ ಕುರಿತಂತೆ ಈಗಾಗಲೇ ತನಿಖೆ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಚರ್ಚೆ ನಡೆಸುತ್ತಿದ್ದಾರೆ. ಅಲ್ಲದೇ, ಅಧಿವೇಶನದಲ್ಲಿಯೂ ಚರ್ಚೆ ಆಗಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಧಾರ್ಮಿಕ ದೇವಾಲಯಗಳ ರಕ್ಷಣೆ ಕಾಯ್ದೆಯಲ್ಲಿ ಎಲ್ಲ ಧರ್ಮದ ದೇವಾಲಯಗಳನ್ನು ರಕ್ಷಣೆ ಮಾಡಲಾಗುವುದು ಎಂದು ಹೇಳಿದರು.

ಸುತ್ತೂರು ಶಾಖಾ ಮಠಕ್ಕೆ ಶಶಿಕಲಾ ಜೊಲ್ಲೆ ಭೇಟಿ

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರು ಅಪಘಾತ: ಡ್ರಂಕ್ & ಡ್ರೈವ್ ಶಂಕೆ-ಚಾಲಕ ಪೊಲೀಸ್ ವಶಕ್ಕೆ

ಎಲ್ಲ ಧರ್ಮದ ಧಾರ್ಮಿಕ ಕೇಂದ್ರಗಳು ಭಾವನಾತ್ಮಕ ಕೇಂದ್ರಗಳಾಗಿವೆ. ಇವುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ನ್ಯಾಯಾಲಯದ ಅದೇಶವನ್ನು ಪಾಲನೆ ಮಾಡಿಕೊಂಡು ಮಸೂದೆ ಜಾರಿಗೆ ತರಲಾಗುವುದು. ಈ ಮಸೂದೆಯಿಂದ ರಾಜ್ಯದ ಸಾವಿರಾರು ದೇವಾಲಯಗಳ ರಕ್ಷಣೆಯಾಗಲಿದೆ. ಚರ್ಚ್​, ಮಸೀದಿ, ದೇವಾಲಯಗಳು ರಕ್ಷಿಸಲ್ಪಡುತ್ತವೆ. ಭಕ್ತಾದಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

Last Updated :Sep 26, 2021, 12:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.