ETV Bharat / city

ನೋಟು ಅಮಾನ್ಯೀಕರಣಕ್ಕೆ 3 ವರ್ಷ: ಶಿವಮೊಗ್ಗದಲ್ಲಿ 'ಕರಾಳ ದಿನ' ಆಚರಣೆ

author img

By

Published : Nov 8, 2019, 7:41 PM IST

ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣಗೊಳಿಸಿ ಮೂರು ವರ್ಷ ಕಳೆದ ಹಿನ್ನೆಲೆ ಶಿವಮೊಗ್ಗದಲ್ಲಿ ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಎನ್​ಎಸ್​ಯುಐ ಸಂಘಟನೆ ವತಿಯಿಂದ ಕರಾಳ ದಿನವನ್ನಾಗಿ ಆಚರಿಸಲಾಯಿತು.

ಪ್ರತಿಭಟನೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣಗೊಳಿಸಿ ಮೂರು ವರ್ಷ ಕಳೆದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಹಾಗೂ ಎನ್​ಎಸ್​ಯುಐ ಸಂಘಟನೆ ವತಿಯಿಂದ ಕರಾಳ ದಿನವನ್ನಾಗಿ ಆಚರಿಸಲಾಯಿತು.

ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ

ನಗರದ ಕಾಂಗ್ರೆಸ್ ಕಚೇರಿಯಿಂದ ಮಹಾವೀರ ಸರ್ಕಲ್ ವರೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಕಪ್ಪು ಶರ್ಟ್ ಧರಿಸಿ ಹಾಗೂ ಮೋದಿ ಭಾವಚಿತ್ರವಿರುವ ಬ್ಯಾನರ್​​ಗೆ ಬೆಂಕಿ ಹಚ್ಚಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ನೋಟು ಅಮಾನ್ಯೀಕರಣದಿಂದಾಗಿ ದೇಶದ ಆರ್ಥಿಕತೆ ಸಂಪೂರ್ಣ ಕುಸಿದಿದೆ. ದೇಶದಲ್ಲಿ ಉದ್ಯೋಗ ಸಮಸ್ಯೆ ಸೃಷ್ಟಿ ಆಗಿದೆ, ಕೈಗಾರಿಕೆಗಳು ಮುಚ್ಚುತ್ತಿವೆ, ಕೃಷಿ ಕ್ಷೇತ್ರ ಅಪಾಯದಲ್ಲಿದೆ. ಇದಕ್ಕೆಲ್ಲಾ ಮೋದಿ, ಸರ್ವಾಧಿಕಾರಿ ರೀತಿಯಲ್ಲಿ ತೆಗೆದುಕೊಂಡ ನೋಟು ಅಮಾನ್ಯೀಕರಣ ನೀತಿಯೇ ಕಾರಣ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಇನ್ನೊಂದೆಡೆ ನಗರದ ಗಾಂಧಿ ಪಾರ್ಕ್​ನಲ್ಲಿರುವ ಗಾಂಧಿ ಪ್ರತಿಮೆ ಎದುರು ಎನ್ಎಸ್​​ಯುಐ ಸಂಘಟನೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿತು. ನರೇಂದ್ರ ಮೋದಿ ಅವರು ಅಚ್ಚೆ ದಿನ್ ಅಂತ ಹೇಳಿ ಅಧಿಕಾರಕ್ಕೆ ಬಂದು ಜನ ಸಾಮಾನ್ಯರಿಗೆ ಅನ್ಯಾಯ ಮಾಡಿದ್ದಾರೆ, ದೇಶವನ್ನು ಆರ್ಥಿಕ ದಿವಾಳಿತನಕ್ಕೆ ತಳ್ಳುತ್ತಿದ್ದಾರೆ. 2016 ರ ನವೆಂಬರ್​ನಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದರು. ನನಗೆ 50 ದಿನ ಕಲಾವಕಾಶ ನೀಡಿ ನಾನು ಎಲ್ಲವನ್ನು ಸರಿ ಮಾಡುತ್ತೇನೆ ಎಂದು ಹೇಳಿ ಮಾಡಲಿಲ್ಲ. ನೋಟ್ ಬ್ಯಾನ್ ಆದಾಗಿನಿಂದ ದೇಶದ ಆರ್ಥಿಕ ಸ್ಥಿತಿ ದಿನೇ ದಿನೇ ಕುಸಿಯುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಲ್ಲಣಗಳು ಶುರುವಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Intro:ಶಿವಮೊಗ್ಗ,
ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಪ್ಪು ದಿನ ಆಚರಣೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ಸಾವಿರ ಮತ್ತು ಒಂದು ಸಾವಿದರ ನೋಟು ಬ್ಯಾನ್ ಮಾಡಿ ಮೂರು ವರ್ಷಗಳ ಕಳೆದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ ಸರ್ಕಾರದ ವಿರುದ್ಧ ಕರಾಳ ದಿನವನ್ನಾಗಿ ಆಚರಣೆ ಮಾಡುವ ಮೂಲಕ ಕಾಂಗ್ರೆಸ್ ಕಛೇರಿ ಯಿಂದ ಮಹಾವೀರ ಸರ್ಕಲ್ ವರೆಗೆ ಕಪ್ಪು ಪಟ್ಟಿ ಹಾಗೂ ಕಪ್ಪು ಶರ್ಟ್ ಹಾಕಿ ಪ್ರತಿಭಟನೆ ಮಾಡಲಾಯಿತು.
ನಂತರ ಮೋದಿಯವರ ಭಾವಚಿತ್ರ ದ ಬ್ಯಾನರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನೋಟು ಅಮಾನಿಕರಣದಿಂದಾಗಿ ದೇಶದ ಆರ್ಥಿಕತೆ ಸಂಪೂರ್ಣ ಕುಸಿದಿದೆ. ಹಾಗೂ ದೇಶದಲ್ಲಿ ಉದ್ಯೋಗ ಸಮಸ್ಯೆ ಸೃಷ್ಟಿ ಆಗಿದೆ ,ಕೈಗಾರಿಕೆಗಳು ಮುಚ್ಚುತ್ತಿವೆ , ಕೃಷಿ ಕ್ಷೇತ್ರ ಅಪಾಯದಲ್ಲಿ ದೆ ಇದಕ್ಕೆಲ್ಲಾ ಮೋದಿ ಅವರ ಸರ್ವಾಧಿಕಾರಿ ರೀತಿಯಲ್ಲಿ ತೇಗೆದುಕೊಂಡ ನೋಟು ಅಮಾನಿಕರಣ ನೀತಿಯೇ ಕಾರಣ ಎಂದು ಪ್ರತಿಭಟನೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು.
ಬೈಟ್.. ಹೆಚ್.ಎಸ್ ಸುಂದರೇಶ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ





Body:ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.