ETV Bharat / city

ಕುಟುಂಬಸ್ಥರೊಂದಿಗೆ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಾಗಿಯಾದ ಮಾಜಿ ಸಿಎಂ ಬಿಎಸ್​ವೈ

author img

By

Published : Apr 16, 2022, 5:15 PM IST

B S Yediyurappa family took part in Hucharaya swamy Brahma Chariot procession
ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಾಗಿಯಾದ ಬಿಎಸ್​ವೈ ಕುಟುಂಬ

ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಬಿ ಎಸ್ ಯಡಿಯೂರಪ್ಪ ಕುಟುಂಬ ಭಾಗಿಯಾಗಿತ್ತು..

ಶಿವಮೊಗ್ಗ : ಶಿಕಾರಿಪುರದಲ್ಲಿ ಇಂದು ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಜರುಗಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರಾಧ್ಯ ದೈವ ಹುಚ್ಚರಾಯ ಸ್ವಾಮಿ. ಈ ಹಿನ್ನೆಲೆ ಪ್ರತಿ ವರ್ಷ ಹುಚ್ಚರಾಯ ಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ತಪ್ಪದೇ ಭಾಗಿಯಾಗುತ್ತಾರೆ. ಇಂದು ಸಹ ರಥೋತ್ಸವದಲ್ಲಿ ಯಡಿಯೂರಪ್ಪನವರು ತಮ್ಮ ಕುಟುಂಬಸ್ಥರೊಂದಿಗೆ ಭಾಗಿಯಾಗಿದ್ದರು.

ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಾಗಿಯಾದ ಬಿಎಸ್​ವೈ ಕುಟುಂಬ..

ಯಡಿಯೂರಪ್ಪ ಅವರು ರಥೋತ್ಸವದಲ್ಲಿ ತಮ್ಮ ಪುತ್ರರಾದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ತಮ್ಮ ಕುಟುಂಬ ಸಮೇತ ಭಾಗಿಯಾಗಿದ್ದರು. ರಥೋತ್ಸವಕ್ಕೂ ಮುನ್ನ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ನಂತರ ಹುಚ್ಚರಾಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹುಚ್ಚರಾಯ ಸ್ವಾಮಿಯ ರಥ ಎಳೆದರು.

B S Yediyurappa family took part in Hucharaya swamy Brahma Chariot procession
ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಾಗಿಯಾದ ಬಿಎಸ್​ವೈ ಕುಟುಂಬ

ಇದನ್ನೂ ಓದಿ: 108 ಅಡಿಯ ಹನುಮಾನ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ದೇವಾಲಯವು ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುತ್ತದೆ. ಜಾತ್ರೆಯಲ್ಲಿ ವ್ಯಾಪಾರಕ್ಕೆ ಎಲ್ಲಾ ಸಮುದಾಯದವರಿಗೂ ಅವಕಾಶ ಮಾಡಿಕೊಡಲಾಗಿದೆ. ಜಾತ್ರೆಯಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಶಿಕಾರಿಪುರ ತಾಲೂಕಿನ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.