ETV Bharat / city

ಶಿವಮೊಗ್ಗ ನಗರಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್!

author img

By

Published : Feb 22, 2022, 11:47 AM IST

ಕರ್ಫ್ಯೂ ಜಾರಿ ಹಿನ್ನೆಲೆ ನಗರದಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿ-ಮುಗ್ಗಟ್ಟುಗಳು ಸಂಪೂರ್ಣ ಬಂದ್​ ಆಗಿವೆ. ಒಟ್ಟಾರೆ ಪೊಲೀಸ್ ಇಲಾಖೆ ಸಹ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ..

high police alert in shivamogga
ಶಿವಮೊಗ್ಗದಲ್ಲಿ ಪೊಲೀಸ್ ಬಂದೋಬಸ್ತ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಆದೇಶಿಸಿದ್ದಾರೆ.

ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್..

ಈ ಹಿನ್ನೆಲೆಯಲ್ಲಿ ಇಂದು ನಗರದ ಪ್ರಮುಖ ಸರ್ಕಲ್ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ವಹಿಸಲಾಗಿದೆ. ನಗರದಲ್ಲಿ ಯಾವುದೇ ರೀತಿಯಲ್ಲೂ ಶಾಂತಿ ಕದಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿ ವಾಹನ ಸವಾರರಿಗೆ ಪೊಲೀಸರು ಅನಗತ್ಯವಾಗಿ ಓಡಾಡದಂತೆ ಮನವಿ ಮಾಡುತ್ತಿದ್ದಾರೆ. ಹಾಗೆಯೇ ಕರ್ಫ್ಯೂ ಜಾರಿಯಲ್ಲಿರುವುದರಿಂದ ಯಾರೂ ಮನೆಯಿಂದ ಹೊರಬರದಂತೆ ಅನೌನ್ಸ್‌ ಮಾಡಲಾಗುತ್ತಿದೆ.

  • Karnataka | We've taken 3-4 persons into custody. As of now, we strongly believe this has happened with regard to the previous enmity. Law & order situation is under control. Further probe on: Dr K Thiyagarajan, DIG Eastern range on Shivamogga Bajrang Dal activist 'murder' pic.twitter.com/i6h79El1Ok

    — ANI (@ANI) February 22, 2022 " class="align-text-top noRightClick twitterSection" data=" ">

ಅಂಗಡಿ-ಮುಗ್ಗಟ್ಟುಗಳು ಬಂದ್​ : ಕರ್ಫ್ಯೂ ಜಾರಿ ಹಿನ್ನೆಲೆ ನಗರದಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿ-ಮುಗ್ಗಟ್ಟುಗಳು ಸಂಪೂರ್ಣ ಬಂದ್​ ಆಗಿವೆ. ಒಟ್ಟಾರೆ ಪೊಲೀಸ್ ಇಲಾಖೆ ಸಹ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.

ಇದನ್ನೂ ಓದಿ: ಹರ್ಷ ಕುಟುಂಬಕ್ಕೆ ಒಂದು ತಿಂಗಳ ವೇತನ ಕೊಡಲು ಮುಂದಾದ ಶಾಸಕ ಭರತ್ ಶೆಟ್ಟಿ

ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾವು 4 ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಹಳೇ ದ್ವೇಷಕ್ಕೆ ಸಂಬಂಧಿಸಿದಂತೆ ಈ ಘಟನೆ ಸಂಭವಿಸಿದೆ ಎಂಬುದನ್ನು ನಾವು ಬಲವಾಗಿ ನಂಬುತ್ತೇವೆ.

ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದ್ದು, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಈ ಕುರಿತು ಹೆಚ್ಚಿನ ತನಿಖೆ ಎಂದು ಪೂರ್ವ ವಲಯದ ಡಿಐಜಿ ಡಾ.ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.