ETV Bharat / city

ಕೊಲೆ‌ ಆರೋಪಿಗಳನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ: ಶಿವಮೊಗ್ಗ ಡಿಸಿ

author img

By

Published : Feb 21, 2022, 1:03 PM IST

our-priority-is-to-arrest-the-murderer-dc-dr-selvamani
ಡಿಸಿ ಡಾ.ಸೆಲ್ವಮಣಿ.

ನಿನ್ನೆ ರಾತ್ರಿ ನಡೆದ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಪರಿಸ್ಥಿತಿ ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಶಿವಮೊಗ್ಗ: ನಿನ್ನೆ ರಾತ್ರಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ನಡೆದ ಕೂಡಲೇ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.‌ ನಿನ್ನೆ ರಾತ್ರಿಯೇ ಎಲ್ಲಾ ಪೊಲೀಸರನ್ನು ನಿಯೋಜಿಸಲಾಗಿದ್ದು, ಜೊತೆಗೆ ಆರ್‌ಎಎಫ್, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಇಂದು ಸಂಜೆ ಪರಿಸ್ಥಿತಿಯನ್ನು ಅವಲೋಕಿಸಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡುವುದರ ಬಗ್ಗೆ ಪರಿಶೀಲಿಸಲಾಗುವುದು ಎಂದರು.


ನಿನ್ನೆ ರಾತ್ರಿಯಿಂದ ನಾವ್ಯಾರೂ ಮನೆಗೆ ಹೋಗಿಲ್ಲ, ಎಲ್ಲರೂ ಬಂದೋಬಸ್ತ್ ನೋಡ್ತಿದ್ದೇವೆ. ಶಾಂತಿ ಸಭೆ ನಡೆಸುತ್ತೇವೆ. ಸದ್ಯ ನಮ್ಮ ಮುಂದೆ ಇರುವುದು ಯಾರು ಕೊಲೆ ನಡೆಸಿದ್ದರೂ ಅವರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ತಂದು ನಿಲ್ಲಿಸುವುದಾಗಿದೆ. ಇದೇ ವೇಳೆ ಪರೀಕ್ಷೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, ಇಂದಿನ ಎಸ್‌ಎಸ್‌ಎಲ್‌ಸಿ ಪೂರ್ವ ತಯಾರಿ ಪರೀಕ್ಷೆಯನ್ನು ಮುಂದೂಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮೃತ ಹರ್ಷನ ಶವಯಾತ್ರೆಯ ಕುರಿತು ಯಾರೂ ಕೂಡ ನಮ್ಮ ಜೊತೆ ಮಾತನಾಡಿಲ್ಲ. ಈ ಬಗ್ಗೆ ಮುಂದೆ ನೋಡೋಣ ಎಂದು ಹೇಳಿದ್ದಾರೆ.

ಇದನ್ನೂ ಓದಿ:'ಮುಸಲ್ಮಾನ ಗೂಂಡಾಗಳು ಶಿವಮೊಗ್ಗದ ಯುವಕನ ಕೊಲೆ ಮಾಡಿದ್ದಾರೆ': ಸಚಿವ ಕೆ.ಎಸ್‌.ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.