ಶಿವಮೊಗ್ಗದಲ್ಲಿ ಅಂಗಡಿಗಳಿಗೆ ನುಗ್ಗಿದ ಮಳೆ ನೀರು: ಜನ ಜೀವನ ಅಸ್ತವ್ಯಸ್ತ

author img

By

Published : Sep 25, 2021, 12:51 AM IST

rain-in-shimoga

ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಣಾಮವಾಗಿ ಮಳೆ ನೀರು ಅಂಗಡಿ- ಮುಂಗಟ್ಟುಗಳಿಗೆ ನುಗ್ಗಿದ್ದು, ಸಾರ್ವಜನಿಕರು ಪಾಲಿಕೆಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಶಿವಮೊಗ್ಗ: ದಿಢೀರ್​​ ಸುರಿದ ಭಾರಿ ಮಳೆಗೆ ಶಿವಮೊಗ್ಗ ನಗರದ ಬಾಪೂಜಿ ನಗರದ ಅಂಗಡಿ-ಮುಗ್ಗಟ್ಟುಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಣಾಮವಾಗಿ ಈ ಅವ್ಯವಸ್ಥೆ ಸಂಭವಿಸಿದೆ ಎಂಬ ಆರೋಪವಿದೆ.

ಚರಂಡಿಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೇ ರಸ್ತೆ ಮೇಲೆ ಹರಿದಿದೆ. ಹಾಗಾಗಿ ರಸ್ತೆ ಅಕ್ಕ-ಪಕ್ಕದಲ್ಲಿರುವ ಅಂಗಡಿ-ಮುಗ್ಗಟ್ಟುಗಳಿಗೂ ನೀರು ನುಗ್ಗಿದ್ದು ಬಾಪೂಜಿ ನಗರದ ಸಾರ್ವಜನಿಕರು ಮಹಾನಗರ ಪಾಲಿಕೆಗೆ ಹಿಡಿ ಶಾಪ ಹಾಕಿದ್ದಾರೆ.

ಅಂಗಡಿಗಳಿಗೆ ನುಗ್ಗಿದ ಮಳೆ ನೀರು

ಕಳೆದ ನಾಲ್ಕೈದು ದಿನಗಳಿಂದ ಮಳೆ ಆಗಿರಲಿಲ್ಲ. ಆದರೆ ಶುಕ್ರವಾರ ಸಂಜೆ ವೇಳೆಗೆ ದಿಢೀರ್ ಸುರಿದ ಮಳೆಯಿಂದಾಗಿ ಅವಾಂತರ ಸೃಷ್ಠಿ ಆಗಿದೆ.

ಇದನ್ನೂ ಓದಿ: ಡ್ರಗ್ಸ್ ವಿಚಾರವನ್ನು ಕೇವಲ ಸಿನಿಮಾ ರಂಗಕ್ಕೆ ಮಾತ್ರ ಸೀಮಿತ ಮಾಡಬಾರದು : ನಟ ಚೇತನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.