ETV Bharat / city

ಶಿವಮೊಗ್ಗ ನಗರದ 6 ಕಡೆ ತಾತ್ಕಾಲಿಕ ತರಕಾರಿ ಮಾರುಕಟ್ಟೆ ವ್ಯವಸ್ಥೆ

author img

By

Published : May 9, 2021, 9:55 PM IST

chidananda
chidananda

ಈ ನಿಗದಿತ ಸ್ಥಳಗಳಲ್ಲಿ ಬೆಳಗ್ಗೆ 6 ರಿಂದ 10ರವರೆಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮನವಿ ಮಾಡಿದ್ದಾರೆ.

ಶಿವಮೊಗ್ಗ : ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಕೇವಲ ಸಗಟು ವ್ಯಾಪಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆ, ಎಪಿಎಂಸಿ ಒಳಗೆ ಮತ್ತು ಮುಂಭಾಗದಲ್ಲಿ ತರಕಾರಿ ಚಿಲ್ಲರೆ ಮಾರಾಟ ಮಾಡುತ್ತಿದ್ದವರ ಅನುಕೂಲಕ್ಕಾಗಿ ನಗರದ ಆರು ಕಡೆಗಳಲ್ಲಿ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ವಿನೋಬನಗರ ಶಿವಾಲಯ ದೇವಸ್ಥಾನ ಹತ್ತಿರ, ಕಾಶೀಪುರ ಕೇಂಬ್ರಿಡ್ಜ್ ಶಾಲೆಯ ಹತ್ತಿರ, ನವುಲೆ ಕ್ರೀಡಾಂಗಣದ ಎದುರಿನ ಪ್ರದೇಶ, ಖಾಸಗಿ ಬಸ್ ನಿಲ್ದಾಣದ ಒಳಗೆ, ತುಂಗಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಪ್ರದೇಶ ಮತ್ತು ಸೈನ್ಸ್ ಮೈದಾನ ಬಿಹೆಚ್ ರಸ್ತೆಯಲ್ಲಿ ತರಕಾರಿ ಮಾರಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ನಿಗದಿತ ಸ್ಥಳಗಳಲ್ಲಿ ಬೆಳಗ್ಗೆ 6 ರಿಂದ 10ರವರೆಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.