ETV Bharat / city

ಶಾಲೆಗಳಲ್ಲಿ ನಮಾಜ್ ಮಾಡುವ ಹಕ್ಕನ್ನು ಸರ್ಕಾರ ಕೊಟ್ಟಿಲ್ಲ: ಸಚಿವ ಬಿ ಸಿ ನಾಗೇಶ್

author img

By

Published : Aug 18, 2022, 6:03 PM IST

ಗಣೇಶೋತ್ಸವ ಸಂಪ್ರದಾಯ ನಮ್ಮ ಬಿಜೆಪಿ ಸರ್ಕಾರ ಬರುವುದಕ್ಕೂ ಮೊದಲಿನಿಂದಲೂ ನಡೆದುಕೊಂಡು ಬಂದಿದೆ ಎಂದು ಶಿಕ್ಷಣ ಸಚಿವ ನಾಗೇಶ್​ ಹೇಳಿದರು.

government-has-not-given-the-right-to-perform-namaz-in-schools-says-minister-nagesh
ಶಾಲೆಗಳಲ್ಲಿ ನಮಾಜ್ ಮಾಡುವ ಹಕ್ಕನ್ನು ಸರ್ಕಾರ ಕೊಟ್ಟಿಲ್ಲ, ಗಣೇಶೋತ್ಸವ ಸಂಪ್ರದಾಯ: ಸಚಿವ ನಾಗೇಶ್

ತುಮಕೂರು: ಶಾಲೆಗಳಲ್ಲಿ ನಮಾಜ್ ಮಾಡಬೇಕು ಎಂಬ ಹಕ್ಕನ್ನು ಸರ್ಕಾರ ಕೊಟ್ಟಿಲ್ಲ. ಆದರೆ, ಗಣೇಶೋತ್ಸವ ಸಂಪ್ರದಾಯ ಈ ನೆಲದಲ್ಲಿ ಬೆಳೆದು ಬಂದಿತ್ತು. ಹಾಗಾಗಿ, ಅವೆಲ್ಲವೂ ಪದ್ಧತಿ ಪ್ರಕಾರವೇ ನಡೆಯುತ್ತದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದರು.

ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗಣೇಶೋತ್ಸವ ಭಾರತೀಯ ಹಬ್ಬ. ಅದನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಲು ಯಾವುದೇ ಆದೇಶ ಹೊರಡಿಸಿಲ್ಲ. ಆದರೆ, ವಿದ್ಯಾಧಿಪತಿ ಗಣಪತಿಯನ್ನು ಎಲ್ಲೆಡೆಯೂ ಪೂಜಿಸಲಾಗುತ್ತದೆ. ಇದು ನಮ್ಮ ಸಂಸ್ಕೃತಿಯಲ್ಲೇ ಬಂದಿದೆ ಎಂದರು.

ಶಾಲೆಗಳಲ್ಲಿ ನಮಾಜ್ ಮಾಡುವ ಹಕ್ಕನ್ನು ಸರ್ಕಾರ ಕೊಟ್ಟಿಲ್ಲ, ಗಣೇಶೋತ್ಸವ ಸಂಪ್ರದಾಯ: ಸಚಿವ ನಾಗೇಶ್

ಗಣಪತಿ ಉತ್ಸವಗಳು ಮನೆಗಳಲ್ಲಿ ನಡೆಯುತ್ತಿದ್ದವು. ಆದರೆ, ಬಾಲಗಂಗಾಧರ ತಿಲಕ್ ಭಾರತೀಯರನ್ನು ಒಗ್ಗೂಡಿಸಿಕೊಳ್ಳಲು ಗಣಪತಿ ಉತ್ಸವಗಳನ್ನು ಸ್ವಾತಂತ್ರ್ಯ ಚಳವಳಿಯಲ್ಲಿ ಹೋರಾಟದ ಅಸ್ತ್ರವಾಗಿ ರೂಪಿಸಿದ್ದರು. ಈ ಮೂಲಕ ಜನರನ್ನು ಸ್ವಾತಂತ್ರ್ಯ ಪಡೆಯಲು ಉತ್ತೇಜಿಸಿದ್ದರು. ಈ ಸಂಪ್ರದಾಯ ಶಾಲಾ ಕಾಲೇಜು, ಹಾಸೆಲ್‌ಗಳಲ್ಲಿ ನಡೆದುಕೊಂಡು ಬಂದಿದೆ ಎಂದು ಹೇಳಿದರು.

ಈ ಹಬ್ಬವನ್ನು ಹೊಸದಾಗಿ ಆಚರಿಸಿ ಅಥವಾ ಆಚರಿಸಬೇಡಿ ಎಂಬಂಥ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ. ಯಾವ ಸಂಪ್ರದಾಯ ಈ ನೆಲದಲ್ಲಿ ಬೆಳೆದು ಬಂದಿತ್ತೋ ಅವೆಲ್ಲವೂ ಪದ್ಧತಿ ಪ್ರಕಾರವೇ ನಡೆಯುತ್ತದೆ. ನಮ್ಮ ಬಿಜೆಪಿ ಸರ್ಕಾರ ಬರುವುದಕ್ಕೂ ಮೊದಲಿನಿಂದಲೂ ಇದು ಹಾಸುಹೊಕ್ಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಯಚೂರು ಬಗ್ಗೆ ತೆಲಂಗಾಣ ಸಿಎಂ ಹೇಳಿಕೆ: ಬಿಜೆಪಿ ಸರ್ಕಾರದ ಮೌನ ಪ್ರಶ್ನಿಸಿದ ಕಾಂಗ್ರೆಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.