ETV Bharat / city

ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಕಳಿಸಲಾಗಿದ್ದು ಹೈಕಮಾಂಡ್​ ನಿರ್ಧಾರವೇ ಅಂತಿಮ: ಡಿ ಕೆ ಶಿವಕುಮಾರ್​

author img

By

Published : May 22, 2022, 3:25 PM IST

D K Shivakumar
ಡಿ ಕೆ ಶಿವಕುಮಾರ್​

ಎಲ್ಲರ ಒಮ್ಮತದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಮಾಡಿ ಕಳುಹಿಸಲಾಗಿದೆ. ಹೈಕಮಾಂಡ್​ನಿಂದ ಏನು ಸೂಚನೆ ಬರುತ್ತದೆಯೋ, ಅದರಂತೆ ಚುನಾವಣೆ ಎದುರಿಸಿಲಾಗುವುದು ಎಂದು ತುಮುಕೂರಿನಲ್ಲಿ ಡಿ ಕೆ ಶಿವಕುಮಾರ್ ತಿಳಿಸಿದರು.

ತುಮಕೂರು: ರಾಜ್ಯಸಭಾ ಚುನಾವಣೆಗೆ ಸ್ಪಷ್ಟವಾಗಿ ಹೆಸರುಗಳನ್ನು ಅಂತಿಮಗೊಳಿಸಿ ಕಳಿಸಲಾಗಿದೆ. ಎಲ್ಲರ ಒಮ್ಮತದಿಂದ ಹೆಸರುಗಳನ್ನು ಸೂಚಿಸಲಾಗಿದೆ. ಎಲ್ಲಾ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಹೆಸರನ್ನು ಕಳುಹಿಸಿಕೊಡಲಾಗಿದೆ. ಅದನ್ನು ದೆಹಲಿ ಮಟ್ಟದಲ್ಲಿ ಹೈಕಮಾಂಡ್​ ನಿರ್ಧರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಪಟ್ಟಿ ಸಿದ್ಧಪಡಿಸಿ ಕಳಿಸಲಾಗಿದ್ದು, ಹೈಕಮಾಂಡ್​ ನಿರ್ಧಾರವೇ ಅಂತಿಮ ಎಂದ ಡಿಕೆಶಿ

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಹೆಸರನ್ನು ಕಳುಹಿಸಿಕೊಡಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೂರನೆಯ ಅಭ್ಯರ್ಥಿ ಕುರಿತು ತೀರ್ಮಾನ ಮಾಡಿಲ್ಲ. ಬೇರೆ ಪಕ್ಷದವರಿಗೆ ಮಾತುಕತೆ ನಡೆಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅವರು ಕಾಂಗ್ರೆಸ್​ಗೆ ಬಂದರೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಮಳೆ ಅನಾಹುತ ಎದುರಿಸಲು ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.