ಜೆಡಿಎಸ್​ನಿಂದ ಉಚ್ಚಾಟನೆ ಮಾಡಿರೋದು ನನಗೆ ಸಂತಸ ತಂದಿದೆ: ಗುಬ್ಬಿ ಶಾಸಕ ಶ್ರೀನಿವಾಸ್

author img

By

Published : Jun 23, 2022, 11:02 AM IST

Gubbi MLA Shreenivas

ಒಂದು ವರ್ಷದ ಹಿಂದೆ ನನ್ನ ವಿರುದ್ಧ ಅವರು ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಪಕ್ಷದಿಂದ ಉಚ್ಚಾಟಿತನಾಗಿದ್ದೆ. ಇದೇನು ಹೊಸದೇನು ಅಲ್ಲ. ನನಗೇನು ಇದು ಅವಮಾನ, ಮುಜುಗರ ಎಂದು ಅನಿಸುತ್ತಿಲ್ಲ ಎಂದು ಜೆಡಿಎಸ್​ ಶಾಸಕ ಶ್ರೀನಿವಾಸ್​ ಪ್ರತಿಕ್ರಿಯೆ ನೀಡಿದ್ದಾರೆ.

ತುಮಕೂರು: ಜೆ‌ಡಿಎಸ್​ನಿಂದ ಉಚ್ಛಾಟನೆ ಮಾಡಿರುವುದರಲ್ಲಿ ಹೊಸದೇನಿಲ್ಲ. ಉಚ್ಛಾಟನೆ ಮಾಡಿದ್ದು ನನಗೆ ಸಂತಸ ತಂದಿದೆ ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಬೆಳವಣಿಗೆ ಮುಜುಗರ, ಅವಮಾನ ಎಂದು ನನಗೆ ಅನಿಸೋದಿಲ್ಲ ಎಂದಿದ್ದಾರೆ.

ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಮಾಧ್ಯಮದೊಂದಿಗೆ ಮಾತನಾಡಿದರು.

ಯಾವ ಪಕ್ಷದಲ್ಲಾದರೂ ಇದು ನಡೆಯುವಂತಹದ್ದೇ. ಅವರು ನನ್ನ ವಿರುದ್ದ ಒಂದು ವರ್ಷದ ಹಿಂದೆ ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಉಚ್ಛಾಟಿತನಾಗಿದ್ದೆ. ಡಿಸೆಂಬರ್​ನಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಡಿಸೆಂಬರ್​ ಕಳೆದ ಮೇಲೆ ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಸ್ಪೀಕರ್ ಬಳಿ ಹೋದರೆ ಏನಾಗುತ್ತೆ, ವಿಪ್‌ ಉಲ್ಲಂಘನೆಯಾದರೆ ಸ್ಪೀಕರ್ ಕ್ರಮ ಕೈಗೊಳ್ಳಬಹುದು ಎಂದರು.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಜೆಡಿಎಸ್​ನಿಂದ ಇಬ್ಬರು ಶಾಸಕರ ಉಚ್ಚಾಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.