ETV Bharat / city

ಶಿವಕುಮಾರಸ್ವಾಮೀಜಿ ಅವರ 115ನೇ ಜನ್ಮ ದಿನ : ಕಾಂಗ್ರೆಸ್​, ಬಿಜೆಪಿ ಮುಖಂಡರ ಭೇಟಿ

author img

By

Published : Mar 30, 2022, 7:31 PM IST

Shivakumaraswamiji's 115th Birthday
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್  ಸುರ್ಜೇವಾಲಾ

ಶಿವಕುಮಾರಸ್ವಾಮೀಜಿ ಅವರ 115ನೇ ಜನ್ಮ ದಿನಾಚರಣೆಗೆ ಕಾಂಗ್ರೆಸ್​ನ ರಾಹುಲ್​ ಗಾಂಧಿ ಮತ್ತು ಬಿಜೆಪಿಯ ಅಮಿತ್​ ಶಾ ಆಗಮಿಸಲಿದ್ದಾರೆ. ಕಾರ್ಯಕ್ರಮದ ಸಕಲ ಸಿದ್ಧತೆಗಳನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವೀಕ್ಷಿಸಿದರು..

ತುಮಕೂರು : ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಗೌರವ ಸಮರ್ಪಣೆ ಮಾಡಲು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಸಿದ್ದಗಂಗಾ ಮಠಕ್ಕೆ ಮಾ.31ರಂದು ಸಂಜೆ 4 ಗಂಟೆಗೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೀವಂತ ದೇವರಂತಿದ್ದರು ಶಿವಕುಮಾರಸ್ವಾಮೀಜಿ. ತ್ರಿವಿಧ ದಾಸೋಹಕ್ಕೆ ಪೂರಕವಾಗಿ ಕೆಲಸ ಮಾಡಿದ್ದರು. ಇಂತಹ ಮಹಾನ್ ಸಂತನ 115ನೇ ಜನ್ಮ ದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ ಎಂದರು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ತುಮಕೂರು ಮಠಕ್ಕೆ ಭೇಟಿ ನೀಡಿರುವುದು..

ರಾಹುಲ್ ಗಾಂಧಿ ಅವರು ಮಾ.31ರಂದು ಮಠಕ್ಕೆ ಆಗಮಿಸಿ ಶ್ರೀ ಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾರ ಆಗಮನ : ಎಲ್ಲಾ ಪಕ್ಷದ ಮುಖಂಡರು, ಧರ್ಮದವರು ಸಿದ್ದಗಂಗಾ ಕ್ಷೇತ್ರಕ್ಕೆ ನಡೆದುಕೊಳ್ಳುತ್ತಾರೆ, ಕ್ಷೇತ್ರದ ಮಹಿಮೆಯೇ ಅಂತಹುದಾಗಿದೆ. ಹೀಗಾಗಿಯೇ, ಈ ನಡುವೆ ಮಾ.31ರಂದೇ ರಾಹುಲ್ ಗಾಂಧಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುತ್ತಿರಬಹುದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಶಿವಕುಮಾರಸ್ವಾಮೀಜಿ ಅವರ 115ನೇ ಜನ್ಮ ದಿನ ಕಾರ್ಯಕ್ರಮದ ಮೇಲ್ವಿಚಾರನೆ ನಡೆಸಿದ ಬಿ. ವೈ. ವಿಜಯೇಂದ್ರ

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಶಿವಕುಮಾರಸ್ವಾಮೀಜಿ ಅವರ 115ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಏ.1ರಂದು ಬೃಹತ್ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಸ್ಥಾನದಲ್ಲಿ ಅಮಿತ್ ಶಾ ಗುರುತಿಸಿಕೊಂಡಿದ್ದಾರೆ. ಸಹಜವಾಗಿಯೇ ತುಮಕೂರು ನಗರದಲ್ಲಿ ಉತ್ಸಾಹ ದೊಡ್ಡಮಟ್ಟದಲ್ಲಿದೆ. ಅಮಿತ್ ಶಾ ಹೆಲಿಪ್ಯಾಡ್​ನಿಂದ ನೇರವಾಗಿ ಮಠಕ್ಕೆ ಬರಲಿದ್ದು, ಬಂದ ನಂತರ ಪೂರ್ಣಕುಂಬ ಸ್ವಾಗತ ನೀಡಲಾಗುವುದು ಎಂದರು.

ಇದನ್ನೂ ಓದಿ: ಮೂರು‌ ಪಿಡುಗುಗಳು ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡಿವೆ: ಶಾಸಕ ಯತ್ನಾಳ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.