ಚಿತ್ರದುರ್ಗ : ಸಾಲದ ಹಣ ಕೊಡುವುದಾಗಿ ಕರೆಸಿ ವ್ಯಕ್ತಿಯ ಬರ್ಬರ ಹತ್ಯೆ

author img

By

Published : Dec 7, 2021, 2:17 PM IST

Updated : Dec 7, 2021, 4:03 PM IST

a man murder in chitradurga

ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ..

ಚಿತ್ರದುರ್ಗ : ಸಾಲ ನೀಡಿದ್ದ ಹಣವನ್ನು ವಾಪಸ್‌ ನೀಡುವುದಾಗಿ ವ್ಯಕ್ತಿಯನ್ನು ಕರೆಸಿಕೊಂಡು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ.

ಸಾಲದ ಹಣ ಕೊಡುವುದಾಗಿ ಕರೆಸಿ ವ್ಯಕ್ತಿಯ ಬರ್ಬರ ಹತ್ಯೆ

ಹೊರಪೇಟೆ ನಿವಾಸಿ ಮಹ್ಮದ್ ಅಜರ್(28) ಮೃತ ದುರ್ದೈವಿ. ಮುಬಾರಕ್, ಬಾಬು ಹಾಗೂ ಪ್ರದೀಪ್ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಹಣದ ವ್ಯವಹಾರ ಹಿನ್ನೆಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

Last Updated :Dec 7, 2021, 4:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.