ETV Bharat / entertainment

'ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು'?: ಚೇತನ್​​​ ವೀಸಾ ರದ್ಧತಿ ಬಗ್ಗೆ ನಟ ಕಿಶೋರ್ ಹೇಳಿದ್ದಿಷ್ಟು!

author img

By

Published : Apr 18, 2023, 3:35 PM IST

Updated : Apr 18, 2023, 4:02 PM IST

ನಟ‌ ಚೇತನ್ ಅವರ ವೀಸಾ ರದ್ದುಗೊಳಿಸಿರುವ ಬಗ್ಗೆ ನಟ ಕಿಶೋರ್ ಪರೋಓಕ್ಷವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Actor Kishore reaction on Chetan visa cancellation
ಚೇತನ್​​​ ವೀಸಾ ರದ್ದಿಗೆ ನಟ ಕಿಶೋರ್ ಪ್ರತಿಕ್ರಿಯೆ

ಆ ದಿನಗಳು ಖ್ಯಾತಿಯ ನಟ‌ ಚೇತನ್ ಅವರ ವೀಸಾ ರದ್ದುಗೊಳಿಸಿರುವ ನೋಟಿಸ್ ಅನ್ನು ಕೇಂದ್ರ ಗೃಹ ಇಲಾಖೆ ಕಳುಹಿಸಿದೆ‌. ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸದ್ದು ಮಾಡುವ ನಟ‌ ಚೇತನ್ ಅವರ ವೀಸಾ ರದ್ದು ವಿಚಾರ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಪರ ವಿರೋಧ ಚರ್ಚೆಗೆ ವೇದಿಕೆ ಸೃಷ್ಟಿಯಾಗಿದೆ. ಇದೀಗ ಕಾಂತಾರ ಖ್ಯಾತಿಯ ನಟ ಕಿಶೋರ್​ ಸಹ ಪರೋಕ್ಷವಾಗಿ, ಚೇತನ್​ ಅವರ ಹೆಸರನ್ನು ಉಲ್ಲೇಖಿಸದೇ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Actor Kishore reaction on Chetan visa cancellation
ನಟ ಕಿಶೋರ್ ಪೋಸ್ಟ್

ನಟ ಕಿಶೋರ್​ ಪೋಸ್ಟ್: ನಟ ಕಿಶೋರ್​ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಧೀರ್ಘ ಬಹರದ ಪೋಸ್ಟ್ ಹಂಚಿಕೊಂಡಿದ್ದಾರೆ. ''ಹಿಂದುತ್ವ ಎನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನಸ್ಥಿತಿ ಇರುವಂತಹದ್ದು. ಆದರೆ 'ಹಿಂದುತ್ವ' ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೇ ಎನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?. ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?. ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?'' ಎಂದು ತಿಳಿಸಿದ್ದಾರೆ.

  • HM accuses me of ‘promoting ill will, hatred, & disharmony against particular community’

    Not true

    Our fight against system means dismantling birthright-based hierarchy, Brahminism—not agnst any caste/community

    Our equalitarian icons taught us; power structure always retaliates pic.twitter.com/uKiU8cNNfo

    — Chetan Kumar Ahimsa / ಚೇತನ್ ಅಹಿಂಸಾ (@ChetanAhimsa) April 18, 2023 " class="align-text-top noRightClick twitterSection" data=" ">

ನೆಟ್ಟಿಗರು ಹೀಗಂದರು: ಸಾಮಾಜಿಕ ಜಾಲತಾಣದಲ್ಲಿ ನಟ ಕಿಶೋರ್​ ಅವರ ಈ ಪೋಸ್ಟ್​ಗೆ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 'ಧರ್ಮವೇ ಅಧರ್ಮದ ಕಡೆಗೆ ಹೋದಾಗ ಅಧರ್ಮವನ್ನು ಬೆಂಬಲಿಸಿ ಧರ್ಮವನ್ನು ಸರಿಪಡಿಸಬೇಕು' ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. 'ಇಂದು ಜನ ಸಾಮಾನ್ಯರು ಹಿಂದುತ್ವಕ್ಕೆ ಹಿಂದೂ ಧರ್ಮಕ್ಕೂ ಇರುವ ವ್ಯತ್ಯಾಸ ತಿಳಿಯದೇ ಮೋಸ ಹೋಗುತ್ತಿದ್ದಾರೆ. ಈ ಪಕ್ಷ ಜನರ ಮುಗ್ಧತೆಯ ದುರುಪಯೋಗ ಪಡಿಸಿಕೊಳ್ಳುತ್ತಿದೆ' ಎಂದು ಬರೆದಿದ್ದಾರೆ. 'ಹಿಂದೂಗಳು ಅನ್ನೋ ಹೆಸರಲ್ಲಿ ಕನ್ನಡಿಗರಿಗೆ, ಕನ್ನಡಕ್ಕೆ ಅಪಮಾನವಾಗುತ್ತದೆ' ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಸುಂದರ ಫೋಟೋಗಳಲ್ಲಿ ಶಾರುಖ್​ ಖಾನ್​ ಕುಟುಂಬ: 'ಪಠಾಣ್​ ಫ್ಯಾಮಿಲಿ' ಎಂದ ಫ್ಯಾನ್ಸ್

ಚೇತನ್​ ಟ್ವೀಟ್: 'ಗೃಹ ಸಚಿವಾಲಯವು ನಿರ್ದಿಷ್ಟ ಸಮುದಾಯದ ವಿರುದ್ಧ ದುರಾಗ್ರಹ, ದ್ವೇಷ ಮತ್ತು ದುಷ್ಟತನವನ್ನು ಪ್ರಚಾರ ಮಾಡುತ್ತಿದೆ ಎಂದು ನನ್ನ ಮೇಲೆ ಆರೋಪಿಸಿದೆ. ಇದು ನಿಜವಲ್ಲ. ಅನ್ಯಾಯದ ವ್ಯವಸ್ಥೆಯ ವಿರುದ್ಧ ನಮ್ಮ ಹೋರಾಟ, ಎಂದರೆ ಜನ್ಮಸಿದ್ಧ ಹಕ್ಕು - ಆಧಾರಿತ ಶ್ರೇಣಿಕೃತ ಅಸಮಾನತೆಯನ್ನು ಅಂದರೆ ಬ್ರಾಹ್ಮಣ್ಯವನ್ನು ಕಿತ್ತು ಹಾಕುವುದು - ನಾವು ಯಾವುದೇ ಜಾತಿ ಅಥವಾ ಸಮುದಾಯದ ವಿರುದ್ಧ ಅಲ್ಲ. ಇದನ್ನು ಸಮಾನತೆಯ ಐಕಾನ್​ಗಳು ನಮಗೆ ಕಲಿಸುತ್ತಿರುವುದು. ಆದರೆ, ಆಡಳಿತದ ಶಕ್ತಿ ರಚನೆಯು ಯಾವಾಗಲೂ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತದೆ ಎಂದು ಸಾಮಾಜಿಕ ಹೋರಾಟಗಾರರೂ ಆಗಿರುವ ನಟ ಚೇತನ್​ ಇಂದು ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಒಟ್ಟಾರೆ ಚೇತನ್​ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದನ್ನು ಮುಂದುವರಿಸುತ್ತಿದ್ದು, ಈ ಬಗ್ಗೆ ಮಿಶ್ರ ಅಭಿಪ್ರಾಯಗಳು ಹೊರ ಬರುತ್ತಿವೆ.

ಇದನ್ನೂ ಓದಿ: ಚೇತನ್ ವೀಸಾ ರದ್ದು: ಅಮೆರಿಕಕ್ಕೆ ಹೋಗಲ್ಲ, ಇಲ್ಲೇ ಇರುತ್ತೇನೆಂದ ನಟ

Last Updated : Apr 18, 2023, 4:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.