ETV Bharat / entertainment

ಬಿಗ್​​ ಬಾಸ್​ ಮನೆಯಲ್ಲಿ ಮುದ್ದೆ ತಂದ ಆಪತ್ತು...! ವಿಡಿಯೋ ನೋಡಿ

author img

By ETV Bharat Karnataka Team

Published : Dec 15, 2023, 1:56 PM IST

ಮುದ್ದೆ ತಂದ ಆಪತ್ತು ಶೀರ್ಷಿಕೆಯಡಿ ಕನ್ನಡ ಬಿಗ್​ ಬಾಸ್ ಪ್ರೋಮೋ ಅನಾವರಣಗೊಂಡಿದೆ.

Bigg Boss kannada Promo
ಬಿಗ್​​ ಬಾಸ್​ ಪ್ರೋಮೋ

ಕನ್ನಡ ಬಿಗ್‌ ಬಾಸ್ ಮನೆ ಸದಸ್ಯರು ಈ ಇಡೀ ವಾರ ಶಾಲಾ ಮಕ್ಕಳಾಗಿ ನಕ್ಕು ನಲಿದಿದ್ದರು. ಸಣ್ಣ- ಪುಟ್ಟ ಭಿನ್ನಾಭಿಪ್ರಾಯಗಳನ್ನು ಹೊರತುಪಡಿಸಿದರೆ ಯಾವುದೇ ಜಗಳಗಳಿಲ್ಲದೇ, ಯಾವುದೇ ತರನಾದ ಅನಾಹುತಗಳಾಗದೇ ಸುವ್ಯವಸ್ಥಿತವಾಗಿಯೇ ಕಳೆಯಿತು. ಇನ್ನೇನು ಇದೇ ರೀತಿ ಈ ವಾರ ಸುಖಾಂತ್ಯ ಕಾಣಲಿದೆ ಎನ್ನುವ ಹೊತ್ತಿಗೆ ಬಿಗ್‌ ಬಾಸ್‌ ಮನೆಯಲ್ಲಿ ಕೋಲಾಹಲವೆದ್ದಿದೆ. 'ಆಲ್ರಡಿ ಅವ್ರೆಲ್ಲ ರಾಕ್ಷಸರಾಗ್ತಿದಾರೆ' ಎಂದು ತುಕಾಲಿ ಸಂತೋಷ್‌ ಕ್ಯಾಮರಾ ಎದುರು ನಿಂತು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾದರೆ ನಿಜಕ್ಕೂ ನಡೆದಿದ್ದೇನು? ಮನೆಯೊಳಗಿನ ಮುದ್ದೆ ಮುನಿಸಿನ ಸಣ್ಣ ಸುಳಿವು ಇಂದು ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಸಿಕ್ಕಿದೆ.

ಮುದ್ದೆ ತಂದ ಆಪತ್ತು!: ಕಲರ್ಸ್ ಕನ್ನಡ ಸೋಷಿಯಲ್​ ಮೀಡಿಯಾಗಳಲ್ಲಿ ಮುದ್ದೆ ತಂದ ಆಪತ್ತು ಶೀರ್ಷಿಕೆಯಡಿ ಪ್ರೋಮೋ ಅನಾವರಣಗೊಳಿಸಿದೆ. ರಾಗಿ ಹಿಟ್ಟನ್ನು ನೋಡಿ, ಪ್ರತಾಪ್‌ ಅವರಿಗೆ ಯಾಕೋ ಮುದ್ದೆ ತಿನ್ನುವ ಮನಸ್ಸಾಗಿದೆ. 'ಯಾರಿಗೆಲ್ಲ ಮುದ್ದೆ ಬೇಕು?' ಎಂದು ಮನೆ ಸದಸ್ಯರನ್ನು ಕೇಳಿದ್ದಾರೆ. ಕಾರ್ತಿಕ್‌, 'ತಿಂತಿನಿ ಕಣೋ ಮಾಡೋ' ಎಂದು ಪ್ರತಾಪ್‌ ಅವರಿಗೆ ಪ್ರೋತ್ಸಾಹ ಕೊಟ್ಟಿದ್ದಾರೆ. ತುಕಾಲಿ ಸಂತೋಷ್​ ಕೂಡ, ಮಾಡೋದ್ ಮಾಡ್ತಿದ್ದೀಯಾ, ಸ್ವಲ್ಪ ದಪ್ಪ ಮಾಡೋ ಎಂದು ಕೇಳಿದ್ದಾರೆ. ಪ್ರತಾಪ್ ಉತ್ಸಾಹದಿಂದಲೇ ಎಲ್ಲರಿಗೂ ಮುದ್ದೆ ಮಾಡಿ ಉಣ ಬಡಿಸಿದ್ದಾರೆ. ಎಲ್ಲರೂ ಖುಷಿಯಿಂದಲೇ ತಿಂದಿದ್ದಾರೆ ಕೂಡ.

ಆದರೆ, ಮಧ್ಯದಲ್ಲಿ ಎಲ್ಲೋ ತಾಳ ತಪ್ಪಿದೆ. ಮನೆಯ ಗ್ಯಾಸ್‌ ಸ್ಟಾಪ್ ಆಗಿದೆ. ಮಾಡಿರೋ ಜವಾಬ್ದಾರಿ ನಾನು ಹೊತ್ಕೋತೀನಿ ಎಂದು ಪ್ರತಾಪ್ ಹೇಳಿದ್ರೂ, ನಮ್ರತಾ 'ಮನೆಗೆ ಶಿಕ್ಷೆಯಾದ್ರೆ ನೀನೇನ್ ಮಾಡ್ತೀಯಾ?' ಎಂದು ಕೇಳಿದ್ದಾರೆ. ಪ್ರತಾಪ್ ಕ್ಯಾಮರಾ ಎದುರು ಹೋಗಿ, ಬಿಗ್‌ ಬಾಸ್ ದಯವಿಟ್ಟು ಕೊಟ್ಬಿಡಿ ಬಿಗ್‌ ಬಾಸ್​ ಎಂದು ಕೇಳಿಕೊಳ್ಳುತ್ತಿದ್ದಾರೆ. ಅತ್ತ ವಿನಯ್‌ ಕೋಪದಿಂದ, ಈಗ ಊಟ ಬರ್ಬೇಕು ಅಷ್ಟೇ. ರಾತ್ರಿ ಊಟ ಆಗ್ಲಿಲ್ಲ ಅಂದ್ರೆ ದೇವ್ರಾಣೆ ನಾನ್ ಸುಮ್ನಿರಲ್ಲ ಎಂದು ಅವಾಜ್ ಹಾಕಿದ್ದಾರೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ದೀಪಿಕಾ ಪಡುಕೋಣೆ ವಿಡಿಯೋ ನೋಡಿ

ಹಾಗಾದ್ರೆ ಮನೆಯೊಳಗೆ ನಿಜವಾಗಿಯೂ ನಡೆದಿದ್ದು ಏನು? ರಾಗಿ ಮುದ್ದೆ ಮಾಡಿದ್ದೇ ಅಪರಾಧವಾಯ್ತೆ? ಅಥವಾ ಮುದ್ದೆ ಮಾಡುವ ಹಂತದಲ್ಲಿ ಏನಾದರೂ ಪ್ರಮಾದವಾಗಿದೆಯಾ? ಮನೆ ಮಂದಿ ಉಪವಾಸದಲ್ಲಿಯೇ ಮಲಗಬೇಕಾಯ್ತಾ?. ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲು ಬಿಗ್‌ ಬಾಸ್ ನೋಡಬೇಕಷ್ಟೇ. ಬಿಗ್‌ ಬಾಸ್ ಕನ್ನಡ 24 ಗಂಟೆಯ ನೇರಪ್ರಸಾರವನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ನೋಡಬಹುದಾಗಿದೆ. ಪ್ರತಿದಿನದ ಎಪಿಸೋಡ್‌ಗಳನ್ನು ಕಲರ್ಸ್ ಕನ್ನಡದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: 'ಋತುಚಕ್ರ ರಜೆ ಅಗತ್ಯವಿಲ್ಲ': ಸ್ಮೃತಿ ಇರಾನಿ ಹೇಳಿಕೆ ಬೆಂಬಲಿಸಿದ ಕಂಗನಾ ರಣಾವತ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.