ETV Bharat / entertainment

ಚೆನ್ನೈನಲ್ಲಿ ಬ್ರಹ್ಮಾಸ್ತ್ರ ​ಸಿನಿಮಾ ಪ್ರಚಾರ - ದಕ್ಷಿಣ ಭಾರತದ ಆಹಾರ ಸವಿದ ರಣ್​​ಬೀರ್ ಕಪೂರ್

author img

By

Published : Aug 24, 2022, 4:26 PM IST

Updated : Aug 24, 2022, 5:14 PM IST

Brahmastra movie promotion Bollywood actor Ranbir Kapoor enjoys South Indian food
ದಕ್ಷಿಣ ಭಾರತದ ಆಹಾರ ಸವಿದ ರಣ್​​ಬೀರ್ ಕಪೂರ್

ಬಾಲಿವುಡ್​​ ಸೂಪರ್‌ಸ್ಟಾರ್ ರಣ್​​ಬೀರ್ ಕಪೂರ್ ಅವರು ನಿರ್ದೇಶಕ ಎಸ್ ಎಸ್ ರಾಜಮೌಳಿ ಮತ್ತು ನಟ ನಾಗಾರ್ಜುನ ಅವರೊಂದಿಗೆ ದಕ್ಷಿಣ ಭಾರತದ ಆಹಾರವನ್ನು ಸವಿದಿದ್ದಾರೆ.

ಬಾಲಿವುಡ್​​ ಸೂಪರ್‌ಸ್ಟಾರ್ ರಣ್​​ಬೀರ್ ಕಪೂರ್ ಬ್ರಹ್ಮಾಸ್ತ್ರ ಸಿನಿಮಾದ ಕಾರ್ಯಕ್ರಮಕ್ಕಾಗಿ ಚೆನ್ನೈಗೆ ಆಗಮಿಸಿದ್ದಾರೆ. ನಿರ್ದೇಶಕ ಎಸ್ ಎಸ್ ರಾಜಮೌಳಿ ಮತ್ತು ನಟ ನಾಗಾರ್ಜುನ ಅವರೊಂದಿಗೆ ದಕ್ಷಿಣ ಭಾರತದ ಆಹಾರವನ್ನು ಸೇವಿಸಿದ್ದಾರೆ.

ಬಾಲಿವುಡ್​ ನಟಿ ಆಲಿಯಾ ಭಟ್ ಮತ್ತು ರಣ್​​ಬೀರ್ ಕಪೂರ್ ಜೋಡಿಯಾಗಿ ನಟಿಸಿರುವ ಬಹು ನಿರೀಕ್ಷಿತ ಬ್ರಹ್ಮಾಸ್ತ್ರ ​ಸಿನಿಮಾ ಸೆಪ್ಟೆಂಬರ್​ 9ರಂದು ಅದ್ಧೂರಿಯಾಗಿ ದೇಶಾದ್ಯಂತ ಬಿಡುಗಡೆ ಆಗಲಿದೆ. ಬ್ರಹ್ಮಾಸ್ತ್ರ ​ಸಿನಿಮಾ ಪ್ರಚಾರ ಕಾರ್ಯಕ್ರಮ ಹಿನ್ನೆಲೆ ರಾಜಮೌಳಿ, ನಾಗಾರ್ಜುನ, ರಣ್​​ಬೀರ್ ಕಪೂರ್ ಚೆನ್ನೈಗೆ ಆಗಮಿಸಿದ್ದಾರೆ. ಈ ವೇಳೆ ಮೂವರೂ ದಕ್ಷಿಣ ಭಾರತದ ಆಹಾರ ಸೇವಿಸಿ ಆನಂದಿಸಿದ್ದಾರೆ.

Brahmastra movie promotion Bollywood actor Ranbir Kapoor enjoys South Indian food
ದಕ್ಷಿಣ ಭಾರತದ ಆಹಾರ ಸವಿದ ರಣ್​​ಬೀರ್ ಕಪೂರ್

ಬ್ರಹ್ಮಾಸ್ತ್ರ ಭಾಗ 1 ಶಿವ ಭಾರತೀಯ ಪುರಾಣಗಳಲ್ಲಿ ಆಳವಾಗಿ ಬೇರೂರಿರುವ ಪರಿಕಲ್ಪನೆಗಳು, ಕಥೆಗಳಿಂದ ಸ್ಫೂರ್ತಿ ಪಡೆದ ಸಿನಿಮಾ. ಅಯಾನ್‌ ಮುಖರ್ಜಿ ನಿರ್ದೇಶನದ ಈ ಚಿತ್ರವನ್ನು ಎಸ್.ಎಸ್ ರಾಜಮೌಳಿ ತಮಿಳು, ತೆಲುಗು, ಕನ್ನಡ, ಮಲಯಾಳಂನಲ್ಲಿ ನಿರ್ಮಿಸಿ ಪ್ರಸ್ತುತಪಡಿಸಲಿದ್ದಾರೆ. ಸ್ಟಾರ್ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್, ಪ್ರೈಮ್ ಫೋಕಸ್ ಮತ್ತು ಸ್ಟಾರ್‌ಲೈಟ್ ಪಿಕ್ಚರ್ಸ್ ನಿರ್ಮಿಸಿರುವ ಈ ಸಿನಿಮಾ ಸೆಪ್ಟೆಂಬರ್ 9 ರಂದು ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸೇರಿ 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಬಾಲಿವುಡ್​ ಬ್ಯೂಟಿ​ ಆಲಿಯಾ ಭಟ್​ಗೂ ತಟ್ಟಿದ ಬಾಯ್ಕಾಟ್​ ಬಿಸಿ

ಒಂದೆಡೆ ಬ್ರಹ್ಮಾಸ್ತ್ರ ​ಸಿನಿಮಾ ಪ್ರಚಾರ ಜೋರಾಗಿ ನಡೆಯುತ್ತಿದ್ದರೆ ಮತ್ತೊಂದೆಡೆ ​ಸಿನಿಮಾ ನೋಡದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವಿಟರ್​​ ಅಭಿಯಾನ ಆರಂಭಿಸಲಾಗಿದೆ. ನಟಿ ಆಲಿಯಾ ಭಟ್ ಇತ್ತೀಚೆಗೆ ನೀಡಿದ ಹೇಳಿಕೆಗೆ ನೆಟಿಜನ್‌ಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆಲಿಯಾ ಭಟ್​ ಜೊತೆಗೆ ಬ್ರಹ್ಮಾಸ್ತ್ರಕ್ಕೆ ಬಾಯ್ಕಾಟ್​ ಬಿಸಿ ತಾಗಿದೆ. ಆದರೆ ಚಿತ್ರತಂಡ ಆಶಾಭಾವನೆಯೊಂದಿಗೆ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುತ್ತಿದೆ.

Last Updated :Aug 24, 2022, 5:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.