ETV Bharat / entertainment

ಬೇಶರಂ ರಂಗ್​ ಹಾಡಿನಲ್ಲಿ ಬದಲಾವಣೆ ಮಾಡಲು ಚಿತ್ರತಂಡಕ್ಕೆ ಸಿಬಿಎಫ್‌ಸಿ ಸೂಚನೆ

author img

By

Published : Dec 29, 2022, 1:11 PM IST

ಬೇಶರಂ ರಂಗ್​ ವಿವಾದ - ಹಾಡಿನಲ್ಲಿ ಬದಲಾವಣೆ ಮಾಡಲು ಚಿತ್ರತಂಡಕ್ಕೆ ಸಿಬಿಎಫ್‌ಸಿ ಸೂಚನೆ - ಅಧ್ಯಕ್ಷ ಪ್ರಸೂನ್ ಜೋಶಿ ಮಾಹಿತಿ.

besharam rang controversy
ಬೇಶರಂ ರಂಗ್​ ವಿವಾದ

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಮುಂಬರುವ ಚಿತ್ರ ಪಠಾನ್‌ನ ಹಾಡುಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಮತ್ತು ಪರಿಷ್ಕೃತ ಆವೃತ್ತಿಯನ್ನು ಸಲ್ಲಿಸಲು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಮಾಪಕರಿಗೆ ಸಲಹೆ ನೀಡಿದೆ ಎಂದು ಅಧ್ಯಕ್ಷ ಪ್ರಸೂನ್ ಜೋಶಿ ಹೇಳಿದ್ದಾರೆ.

ಸಿಬಿಎಫ್‌ಸಿ ಪರೀಕ್ಷೆ: ಚಲನಚಿತ್ರ ತಂಡ ಇತ್ತೀಚೆಗೆ ಪ್ರಮಾಣೀಕರಣಕ್ಕಾಗಿ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಪರಿಶೀಲನಾ ಸಮಿತಿಯನ್ನು ತಲುಪಿತು. ಮಾರ್ಗಸೂಚಿಗಳ ಪ್ರಕಾರ ಸರಿಯಾದ ಮತ್ತು ಸಂಪೂರ್ಣ ಪರಿಶೀಲನಾ ಪ್ರಕ್ರಿಯೆ ನಡೆಯಿತು.

ಪ್ರಸೂನ್ ಜೋಶಿ ಹೇಳಿದ್ದೇನು? "ಸಿಬಿಎಫ್‌ಸಿ ಮಾರ್ಗಸೂಚಿಗಳ ಪ್ರಕಾರ ಪಠಾಣ್ ಚಿತ್ರ ಪರಿಶೀಲನೆ ಪ್ರಕ್ರಿಯೆ ನಡೆದಿದೆ. ಹಾಡುಗಳು ಸೇರಿದಂತೆ ಚಿತ್ರದಲ್ಲಿಯೂ ಕೆಲ ಬದಲಾವಣೆಗಳನ್ನು ಅಳವಡಿಸಲು ಮತ್ತು ಚಿತ್ರಮಂದಿರದ ಬಿಡುಗಡೆಗೆ ಮೊದಲು ಪರಿಷ್ಕೃತ ಆವೃತ್ತಿಯನ್ನು ಸಲ್ಲಿಸಲು ಸಮಿತಿಯು ತಯಾರಕರಿಗೆ ತಿಳಿಸಿದೆ" ಎಂದು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಅಧ್ಯಕ್ಷ ಪ್ರಸೂನ್ ಜೋಶಿ ಮಾಹಿತಿ ನೀಡಿದ್ದಾರೆ.

ಸೃಜನಾತ್ಮಕ ಅಭಿವ್ಯಕ್ತಿ ಮತ್ತು ಪ್ರೇಕ್ಷಕರ ಸಂವೇದನೆಯ ನಡುವೆ ಸರಿಯಾದ ಸಮತೋಲನವನ್ನು ಕಂಡುಕೊಳ್ಳಲು ಸಿಬಿಎಫ್‌ಸಿ ಯಾವಾಗಲೂ ಬದ್ಧವಾಗಿದೆ. ಮತ್ತು ಎಲ್ಲಾ ಮಧ್ಯಸ್ಥಗಾರರ ನಡುವೆ ಅರ್ಥಪೂರ್ಣ ಸಂಭಾಷಣೆಯ ಮೂಲಕ ನಾವು ಯಾವಾಗಲೂ ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ಜೋಶಿ ಹೇಳಿದರು.

ಬೇಶರಂ ರಂಗ್​ ವಿವಾದ: ಬಾಲಿವುಡ್​​ ಸೂಪರ್​ ಸ್ಟಾರ್​ಗಳಾದ ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ನಟನೆಯ ಪಠಾನ್​ ಸಿನಿಮಾ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ 2023 ಜನವರಿಯಲ್ಲಿ ಬಿಡುಗಡೆ ಆಗಲು ಸಜ್ಜಾಗಿದೆ. ಬಹುನಿರೀಕ್ಷಿತ ಪಠಾಣ್‌ ಸಿನಿಮಾದ ಮೊದಲ ಟ್ರ್ಯಾಕ್ ''ಬೇಶರಂ ರಂಗ್'' ಎರಡು ವಾರದ ಹಿಂದೆ ಬಿಡುಗಡೆ ಆಗಿ ಸೋಶಿಯಲ್​ ಮೀಡಿಯಾದಲ್ಲಿ ಬಿಸಿ ಏರಿಸುವ ಜೊತೆಗೆ ವಾದ ವಿವಾದಕ್ಕೆ ವೇದಿಕೆ ಸೃಷ್ಟಿಮಾಡಿಕೊಟ್ಟಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​​​ ಕೆಮಿಸ್ಟ್ರಿ ಸಖತ್​ ವರ್ಕ್​​ ಔಟ್​ ಆಗಿದೆ. ಈ ಜೋಡಿ ಹಾಡಿನಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ಹಾಡಿನ ಕೊನೆಯಲ್ಲಿ ದೀಪಿಕಾ ಧರಿಸಿದ ಕೇಸರಿ ಬಣ್ಣ ವಾದ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಬಹುತೇಕ ಕಡೆ ಈ ಜೋಡಿ ವಿರುದ್ಧ ಆಕ್ರೋಶ ವ್ಯಕ್ತವಾಗಿ ಪ್ರತಿಭಟನೆಗಳು ನಡೆದಿವೆ.

ಹಾಡಿಗೆ ಹಲವರಿಂದ ಆಕ್ಷೇಪ: ಮೊದಲು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹಿಂದಿಯಲ್ಲಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದರು. "ಹಾಡಿನ ಮೊದಲ ನೋಟದಲ್ಲಿ ವೇಷಭೂಷಣಗಳು ಆಕ್ಷೇಪಾರ್ಹವಾಗಿವೆ. ಇದನ್ನು ಬೆಂಬಲಿಸುವ ನಟಿ ದೀಪಿಕಾ ಪಡುಕೋಣೆ ಪಠಾಣ್ ಚಿತ್ರದ ಹಾಡಿನಲ್ಲಿದ್ದಾರೆ. ಅವರ ವೇಷಭೂಷಣಗಳು ಇಡೀ ಹಾಡಿನಲ್ಲಿ ಆಕ್ಷೇಪಾರ್ಹವಾಗಿದ್ದು, ಕೊಳಕು ಮನಸ್ಥಿತಿಯಲ್ಲಿ ಹಾಡನ್ನು ಚಿತ್ರೀಕರಿಸಲಾಗಿದೆ. ಹಾಡುಗಳ ದೃಶ್ಯಗಳು ಮತ್ತು ವೇಷಭೂಷಣಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ, ಮಧ್ಯಪ್ರದೇಶದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ನಾವು ಚರ್ಚೆ ನಡೆಸಬೇಕಾಗುತ್ತದೆ'' ಎಂದು ಎಚ್ಚರಿಸಿದ್ದರು.

ಇದನ್ನೂ ಓದಿ: ಪಠಾಣ್ ವಿವಾದ: ಅಯೋಧ್ಯೆ ಸ್ವಾಮೀಜಿಯಿಂದ ಶಾರುಖ್ ಖಾನ್​ಗೆ ಜೀವ ಬೆದರಿಕೆ

ಅಯೋಧ್ಯೆಯ ಸ್ವಾಮೀಜಿ ಪರಮಹಂಸ ಆಚಾರ್ಯ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಥಿಯೇಟರ್‌ಗಳಲ್ಲಿ ಚಲನಚಿತ್ರವನ್ನು ನಿಷೇಧಿಸಬೇಕೆಂದು ಕರೆ ನೀಡಿದ್ದರು. ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶಿಸಿದರೆ, ಆ ಚಿತ್ರಮಂದಿರ ಸುಟ್ಟುಹಾಕಲಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ''ಬೇಶರಂ ರಂಗ್'' ವಿವಾದ: ಪಠಾಣ್‌ ಬಿಡುಗಡೆ ಆಗೋದು ಅನುಮಾನ​ ಎಂದ ಸಚಿವ

ನಮ್ಮ ಭಗವಾ ರಂಗ್​​ (ಕೇಸರಿ ಬಣ್ಣ)ಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಅಂತಹ ಚಿತ್ರಗಳನ್ನು ಬಹಿಷ್ಕರಿಸಬೇಕು. ಶಾರುಖ್ ಖಾನ್ ಅವರು ಈವರೆಗೆ ಪ್ರವಾದಿ ವಿರುದ್ಧ ಯಾವುದೇ ವೆಬ್ ಸಿರೀಸ್ ಮಾಡಿಲ್ಲ, ಏಕೆಂದರೆ ಅವರಿಗೆ ಧೈರ್ಯವಿಲ್ಲ. ಈಗ ಹಣ ಸಂಪಾದನೆಗೆ ಅವರು ಸನಾತನ ಧರ್ಮವನ್ನು ಅವಮಾನಿಸಿದ್ದಾರೆ. ಸನಾತನ ಧರ್ಮಕ್ಕೆ ಅಪಚಾರ ಮಾಡಿದರೆ ಮರಣದಂಡನೆ ಶಿಕ್ಷೆ ವಿಧಿಸಲಾಗುವುದು ಎಂದು ಪರಮಹಂಸ ಆಚಾರ್ಯ ಜೀವ ಬೆದರಿಕೆ ಹಾಕಿದ್ದರು. ಇವರಲ್ಲದೇ ಇನ್ನೂ ಅನೇಕರು ಈ ಹಾಡಿಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.