ETV Bharat / entertainment

'ಚಂದ್ರಮುಖಿ 2' ನನ್ನ ಕರಿಯರ್​ನ ಬೆಸ್ಟ್ ಸಿನಿಮಾವೆಂದ ಬಾಲಿವುಡ್ ಕ್ವೀನ್ ಕಂಗನಾ ರಣಾವತ್

author img

By ETV Bharat Karnataka Team

Published : Aug 28, 2023, 12:33 PM IST

ಬಹು ನಿರೀಕ್ಷಿತ 'ಚಂದ್ರಮುಖಿ 2' ಚಿತ್ರ ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಿದ್ಧವಾಗಿದೆ. ಈ ಬೆನ್ನಲ್ಲೇ ನಟಿ ಕಂಗನಾ ರಣಾವತ್ ಸಿನಿಮಾ ಬಗ್ಗೆ ಮಾತನಾಡಿದ್ದು, ನನ್ನ ವೃತ್ತಿ ಜೀವನದಲ್ಲಿ 'ಚಂದ್ರಮುಖಿ 2' ಅಂತಹ ಚಿತ್ರ ಮಾಡಿಲ್ಲ ಎಂದಿದ್ದಾರೆ.

Chandramukhi 2
ಚಂದ್ರಮುಖಿ 2

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಣಾವತ್ ಅಭಿನಯದ 'ಚಂದ್ರಮುಖಿ 2' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಟ್ರೇಲರ್, ಟೀಸರ್ ಭಾರಿ ಸದ್ದು ಮಾಡುತ್ತಿದೆ. ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ 2 ಸಿನಿಮಾದ ಆಡಿಯೋ ಲಾಂಚ್ ಇವೆಂಟ್ ಇತ್ತೀಚೆಗೆ ಚೆನ್ನೈನಲ್ಲಿ ಅದ್ಧೂರಿಯಾಗಿ ‌ನೆರವೇರಿದ್ದು, ಇಡೀ ಚಿತ್ರತಂಡ‌ವೇ ಹಾಜರಿತ್ತು.

ನಾಯಕ ನಟ ರಾಘವ್ ಲಾರೆನ್ಸ್ ಮಾತನಾಡಿ, ಹಲವು ಕುತೂಹಲಕಾರಿ ಅಂಶಗಳನ್ನು ಹಂಚಿಕೊಂಡರು. "ದೊಡ್ಡ ಸ್ಟಾರ್‌ಗಳ ಜೊತೆ ಸಿನಿಮಾ ಮಾಡುವ ಸುಭಾಸ್ಕ್ ಕರಣ್ ಅವರು ನನ್ನ ಜೊತೆ ಸಿನಿಮಾ ಮಾಡ್ತಾರಾ ಎಂದು ಆಶ್ಚರ್ಯ ಪಡ್ತಿದ್ದೆ. ಆದರೆ, 'ಚಂದ್ರಮುಖಿ 2' ಅಂತಹ ದೊಡ್ಡ ಸಿನಿಮಾ ಮಾಡಿದ್ರು. ಅವರ ಬ್ಯಾನರ್‌ನ ಭಾಗವಾಗಿರುವುದಕ್ಕೆ ಹೆಮ್ಮೆ ಪಡುತ್ತೇವೆ. ನಮ್ಮ ನಿರ್ದೇಶಕ ವಾಸು ಸರ್ ಅವರಿಗೆ ನಾಲ್ಕು ದಶಕಗಳ ಅನುಭವವಿದೆ.ನಾನು ಸೈಡ್ ಡ್ಯಾನ್ಸರ್ ಆಗಿ ಕೆಲಸ ಮಾಡಿದ ಕಾಲದಿಂದಲೂ ಅವರು ನಿರ್ದೇಶಕರಾಗಿ ಉತ್ತಮ ಚಿತ್ರಗಳನ್ನು ಮಾಡಿದ್ದಾರೆ" ಎಂದರು.‌

Chandramukhi 2
ಚಂದ್ರಮುಖಿ-2 ಚಿತ್ರ ತಂಡ

ಕಂಗನಾ ರಣಾವತ್ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ತಿಳಿದಾಗ ನನಗೆ ಆಶ್ಚರ್ಯವಾಯಿತು. ಕೀರವಾಣಿ ಅವರ ಬಗ್ಗೆ ಮಾತನಾಡಲು ಪದಗಳು ಸಾಕಾಗುವುದಿಲ್ಲ, ಅವರು ಎಂದಿಗೂ ಕೆಲಸದ ಬಗ್ಗೆ ಟೆನ್ಶನ್ ತೆಗೆದುಕೊಳ್ಳುವುದಿಲ್ಲ, ತಮ್ಮ ಕೆಲಸವನ್ನು ಆನಂದಿಸುತ್ತಾರೆ. ಅದಕ್ಕಾಗಿಯೇ ಅವರು ನಮ್ಮ ಚಿತ್ರಕ್ಕೆ ಉತ್ತಮ ಸಂಗೀತ ನೀಡಿದ್ದಾರೆ. ಛಾಯಾಗ್ರಾಹಕ ರಾಜಶೇಖರ್, ಕಲಾ ನಿರ್ದೇಶಕ ತೊಟ್ಟ ಥರಣಿ ಗಾರು, ಸಂಕಲನಕಾರ ಆಂಟನಿ ಸೇರಿದಂತೆ ಇಡೀ ಚಿತ್ರತಂಡದ ಸಹಕಾರದಿಂದ 'ಚಂದ್ರಮುಖಿ 2' ನಂತಹ ಅದ್ಭುತ ಚಿತ್ರವನ್ನು ಮಾಡಲಾಗಿದೆ. ಖಂಡಿತ ಈ ಸಿನಿಮಾ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ಹೇಳಿದರು.

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಮಾತನಾಡಿ, "ನನ್ನ ನಟನಾ ವೃತ್ತಿ ಜೀವನದಲ್ಲಿ 'ಚಂದ್ರಮುಖಿ 2' ಅಂತಹ ಚಿತ್ರ ಮಾಡಿಲ್ಲ. ಅಸಲಿ ವಿಷಯವೇನೆಂದರೆ, ನಾನು ಯಾರ ಬಳಿಯೂ ಆಫರ್ ಕೇಳಿಲ್ಲ, ಮೊದಲ ಬಾರಿಗೆ ನಿರ್ದೇಶಕ ಪಿ. ವಾಸು ಅವರ ಬಳಿ ಕೇಳಿದೆ. ಈ ಚಿತ್ರದಲ್ಲಿ ವಾಸು ಅವರು ನನ್ನ ಪಾತ್ರದ ಜೊತೆಗೆ ಪ್ರತಿ ಪಾತ್ರಕ್ಕೂ ಸಮಾನ ಪ್ರಾಮುಖ್ಯತೆ ನೀಡಿದ್ದಾರೆ.ಇಡೀ ಕ್ರೆಡಿಟ್ ಅವರಿಗೆ ಸಲ್ಲುತ್ತದೆ.ಲಾರೆನ್ಸ್ ಮಾಸ್ಟರ್ ಅನೇಕರಿಗೆ ಸ್ಫೂರ್ತಿ" ಎಂದರು.

Actor Raghav Lawrence
ನಟ ರಾಘವ್ ಲಾರೆನ್ಸ್

ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ.ಕೀರವಾಣಿ ಮಾತನಾಡಿ, ಆಸ್ಕರ್ ಪ್ರಶಸ್ತಿ ಪಡೆದ ನಂತರ ನಾನು ಸಂಗೀತ ಸಂಯೋಜನೆ ಮಾಡಿರುವ ಚಿತ್ರ ಅಂದ್ರೆ 'ಚಂದ್ರಮುಖಿ 2' . ಇಂತಹ ಒಳ್ಳೆಯ ಅವಕಾಶ ನೀಡಿದ ನಿರ್ದೇಶಕ ಪಿ.ವಾಸು ಅವರಿಗೆ ಧನ್ಯವಾದಗಳು. ವಾಸು ಅವರು ಉತ್ತಮ ನಿರ್ದೇಶಕ ಮಾತ್ರವಲ್ಲದೆ, ಒಬ್ಬ ಒಳ್ಳೆಯ ಗಾಯಕ. ನನ್ನ ಮುಂದಿನ ಚಿತ್ರಕ್ಕೆ ಅವರು ಗಾಯಕನಾಗಲು ನಾನು ಬಯಸುತ್ತೇನೆ. ರಾಘವ್​ ಲಾರೆನ್ಸ್ ಅವರ ಬೆಂಬಲದಿಂದ ಹಾಡುಗಳು ಚೆನ್ನಾಗಿ ಬಂದಿವೆ ಎಂದರು.

ಇದನ್ನೂ ಓದಿ : Chandramukhi 2: ಬಹುನಿರೀಕ್ಷಿತ 'ಚಂದ್ರಮುಖಿ 2' ಚಿತ್ರದ 'ಸ್ವಾಗತಾಂಜಲಿ' ಹಾಡು ಬಿಡುಗಡೆ

ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, 'RRR' ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಪಡೆದ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. ರಾಧಾಕೃಷ್ಣ ಎಂಟರ್ಟೈನ್ಮೆಂಟ್ ತೆಲುಗಿನಲ್ಲಿ ಚಂದ್ರಮುಖಿ-2 ಸಿನಿಮಾವನ್ನು ರಿಲೀಸ್ ಮಾಡಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.