ETV Bharat / entertainment

Vamana: 'ವಾಮನ' ಚಿತ್ರದ 'ಮುದ್ದು ರಾಕ್ಷಸಿ' ಹಾಡು ಬಿಡುಗಡೆ

author img

By

Published : Aug 7, 2023, 9:46 PM IST

Vamana movie song released: 'ವಾಮನ' ಸಿನಿಮಾದ 'ಮುದ್ದು ರಾಕ್ಷಸಿ' ಎಂಬ ರೊಮ್ಯಾಂಟಿಕ್​ ಹಾಡನ್ನು ನಟ ಅಭಿಷೇಕ್​ ಅಂಬರೀಶ್ ಬಿಡುಗಡೆಗೊಳಿಸಿದ್ದಾರೆ.

vamana
ವಾಮನ

'ಶೋಕ್ದಾರ್', 'ಬಜಾರ್​' ಮತ್ತು 'ಬೈ ಟು ಲವ್'​ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡ ನಟ ಧನ್ವೀರ್​ ಗೌಡ. ಈ ಸಿನಿಮಾಗಳ ಬಳಿಕ ಧನ್ವೀರ್​ ಮಾಸ್​ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಚಿತ್ರವೇ 'ವಾಮನ'. ಇತ್ತೀಚೆಗಷ್ಟೇ ಸಿನಿಮಾದ ವಾ..ವಾ..ವಾಮನ ಮಾಸ್​ ಸಾಂಗ್​ ಬಿಡುಗಡೆಯಾಗಿ ಹಿಟ್​ ಆಗಿತ್ತು. ಇದೀಗ ಮತ್ತೊಂದು ರೊಮ್ಯಾಂಟಿಕ್​ ಸಾಂಗ್​ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

ವಿ.ನಾಗೇಂದ್ರ ಪ್ರಸಾದ್​ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್​ ಲೋಕನಾಥ್​ ಟ್ಯೂನ್​ ಹಾಕಿದ್ದಾರೆ. ವಿಜಯ್​ ಪ್ರಕಾಶ್​ ಹಾಗೂ ಹರ್ಷಿಕಾ ದೇವನಾಥ್​ ಧ್ವನಿಯಾಗಿದ್ದಾರೆ. ಧನ್ವೀರ್​ ಹಾಗೂ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ. ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಈ 'ಮುದ್ದು ರಾಕ್ಷಸಿ' ಹಾಡನ್ನು ಜೂನಿಯರ್​ ರೆಬಲ್​ ಸ್ಟಾರ್​ ಅಭಿಷೇಕ್​ ಅಂಬರೀಶ್ ಬಿಡುಗಡೆಗೊಳಿಸಿ ಗೆಳೆಯನ ಚಿತ್ರಕ್ಕೆ ಸಾಥ್​ ಕೊಟ್ಟರು.​

ಬಳಿಕ ಮಾತನಾಡಿದ ಅಭಿಷೇಕ್​, "ನಾನು ಈಗಷ್ಟೇ ಮುದ್ದು ರಾಕ್ಷಸಿ ಹಾಡು ನೋಡಿದೆ. ಒಂದು ಸಾಂಗ್ ಹಿಟ್ ಆಗಬೇಕು ಅಂದರೆ ಅದರ ಕ್ರೆಡಿಟ್ ಹೀರೋಗೂ ಅಲ್ಲ ಹೀರೋಯಿನ್​ಗೂ ಅಲ್ಲ, ಮ್ಯೂಸಿಕ್ ಡೈರೆಕ್ಟರ್ ಹಾಗೂ ಸಾಹಿತ್ಯ ಬರೆದವರಿಗೆ ಸಲ್ಲಬೇಕು. ಅವರ ಎಫರ್ಟ್ ಜಾಸ್ತಿ ಇರುತ್ತದೆ. ನಮ್ಮ ಗೆಳೆಯ ಧನ್ವೀರ್ ಇಷ್ಟು ಚೆನ್ನಾಗಿ ರೋಮ್ಯಾನ್ಸ್ ಮಾಡ್ತಾನೆ ಅಂತ ಗೊತ್ತಿರಲಿಲ್ಲ. ಬೈ ಟು ಲವ್ ಸಿನಿಮಾದಲ್ಲಿ ಸ್ವಲ್ಪ ನೋಡಿದ್ದೆವು. ಈಗ ವಾಮನ ಮುಖಾಂತರ ಕಂಪ್ಲೀಟ್ ಕಮರ್ಷಿಯಲ್ ಪ್ಯಾಕೇಜ್, ಕ್ಯೂಟ್ ಲವರ್ ಬಾಯ್ ರೀತಿ ಕಾಣಿಸುತ್ತಿದ್ದಾನೆ" ಎಂದು ಕೊಂಡಾಡಿದರು.

vamana
ಅಭಿಷೇಕ್​ ಅಂಬರೀಶ್ ಮತ್ತು ಧನ್ವೀರ್​ ಗೌಡ

ಧ್ವನೀರ್ ಗೌಡ ಮಾತನಾಡಿ, "ಒಂದೇ ಒಂದು ಫೋನ್ ಕಾಲ್​ಗೆ ಬಂದು ಮುದ್ದು ರಾಕ್ಷಸಿ ಹಾಡನ್ನು ಅಭಿಷೇಕ್ ಅಂಬರೀಶ್ ಅವರು ಲಾಂಚ್ ಮಾಡಿಕೊಟ್ಟಿದ್ದಾರೆ. ಭೂಷಣ್ ಮಾಸ್ಟರ್ ಕೊರಿಯೋಗ್ರಫಿಗೆ ಹೆಜ್ಜೆ ಹಾಕಿದ್ದೇನೆ" ಎಂದು ಸಂತಸ ವ್ಯಕ್ತಪಡಿಸಿದರು. "ಮೊದಲ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈ ಸಾಂಗ್ ನಿಮಗೆ ಡೆಡಿಕೇಟ್​ ಮಾಡುತ್ತಿದ್ದೇವೆ. ಅಜನೀಶ್ ಲೋಕನಾಥ್ ಸಂಗೀತ, ವಿ.ನಾಗೇಂದ್ರ ಪ್ರಸಾದ್ ಮುದ್ದಾದ ಸಾಹಿತ್ಯ, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಧ್ವನಿ ಕೂಡಿಸಿದ್ದು, ಭೂಷಣ್ ಮಾಸ್ಟರ್ ಕೊರಿಯೋಗ್ರಫ್ ಮಾಡಿದ್ದಾರೆ. ಮನೆಗೆ ಹೋಗ್ತಾ ನೀವು ಮುದ್ದು ಮುದ್ದು ರಾಕ್ಷಸಿ ಹಾಡುತ್ತಾ ಹೋಗಿ" ಎಂದು ನಿರ್ದೇಶಕ ಶಂಕರ್ ರಾಮನ್ ನುಡಿದರು.

ವಾಮನ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದಾರೆ. ಇವರಲ್ಲದೇ ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆ.ಆರ್.ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಚೇತನ್‌ ಗೌಡ ಅದ್ಧೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಯುವ ನಿರ್ದೇಶಕ ಶಂಕರ್‌ ರಾಮನ್‌ ರಚಿಸಿ ನಿರ್ದೇಶಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆ್ಯಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಸದ್ಯದಲ್ಲೇ ವಾವನ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

ಇದನ್ನೂ ಓದಿ: "chef ಚಿದಂಬರ "ನಾದ ವಿಷ್ಣುವರ್ಧನ್​ ಅಳಿಯ.. ಅನಿರುದ್ಧ್​ ಹೊಸ ಸಿನಿಮಾಗೆ ಕಿಚ್ಚನ ಸಾಥ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.