ETV Bharat / entertainment

'ಕಬ್ಜ'ದಲ್ಲಿ ಉಪ್ಪಿ ಬಲಗೈ ಬಂಟನಾಗಿ ಅನೂಪ್​ ರೇವಣ್ಣ ರೀ ಎಂಟ್ರಿ

author img

By

Published : Mar 14, 2023, 5:29 PM IST

kabzaa
'ಕಬ್ಜ'ದಲ್ಲಿ ಉಪ್ಪಿ ಬಲಗೈ ಬಂಟನಾಗಿ ಅನೂಪ್​ ರೇವಣ್ಣ

ಮಾಜಿ ಸಚಿವ ಎಚ್​ ಎಂ ರೇವಣ್ಣ ಮಗ ಅನೂಪ್​ 'ಕಬ್ಜ' ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

'ಲಕ್ಷ್ಮಣ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಾಜಿ ಸಚಿವ ಎಚ್​ ಎಂ ರೇವಣ್ಣ ಅವರ ಮಗ ಅನೂಪ್​ 2017 ರಲ್ಲಿ ಬಿಡುಗಡೆಯಾದ 'ಪಂಟ' ಚಿತ್ರದಲ್ಲೂ ನಾಯಕನಾಗಿ ನಟಿಸಿದ್ದರು. ಬಳಿಕ ಸುಮಾರು ಏಳು ವರ್ಷಗಳ ದೀರ್ಘ ಬ್ರೇಕ್​ ತೆಗೆದುಕೊಂಡಿದ್ದ ಅವರು ಇದೀಗ ಆರ್​ ಚಂದ್ರು ನಿರ್ದೇಶನದ 'ಕಬ್ಜ' ಚಿತ್ರದ ಮೂಲಕ ರೀ ಎಂಟ್ರಿ ಕೊಡುತ್ತಿದ್ದಾರೆ.

ಕಬ್ಜ ಚಿತ್ರದಲ್ಲಿ ಅನೂಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ರಿಯಲ್​ ಸ್ಟಾರ್​ ಉಪೇಂದ್ರ ಅವರ ಸ್ನೇಹಿತನ ಪಾತ್ರದಲ್ಲಿ ಅನೂಪ್​ ನಟಿಸಿದ್ದು, ಇಡೀ ಚಿತ್ರದಲ್ಲಿ ಅವರ ಪಾತ್ರ ಸಾಗುತ್ತದೆ. ಕಬ್ಜ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತು ಚಿತ್ರದಲ್ಲಿ ನಟಿಸಿದ ಅನುಭವ ಕುರಿತು ಮಾತನಾಡಿರುವ ಅವರು, ಉಪ್ಪಿ ಸರ್​ ಬಲಗೈ ಬಂಟನಾಗಿ ಕಬ್ಜದಲ್ಲಿ ನಟಿಸಿದ್ದೇನೆ. ಉಪ್ಪಿ ಸರ್​ ನಿರ್ದೇಶಕರಾಗಿ, ನಟರಾಗಿ ಭಾರತೀಯ ಚಿತ್ರರಂಗದಲ್ಲೇ ದೊಡ್ಡ ಹೆಸರು ಮಾಡಿದ್ದಾರೆ. ಅವರ ಜೊತೆಗೆ ನಾಲ್ಕು ವರ್ಷ ಕಾಲ ಕಳೆಯುವ ಅವಕಾಶ ಸಿಕ್ಕಿತು ಎಂದು ತಮ್ಮ ಸಂತಸ ಹಂಚಿಕೊಂಡರು.

kabzaa
ಕಬ್ಜದಲ್ಲಿ ಉಪ್ಪಿ ಬಲಗೈ ಬಂಟನಾಗಿ ಅನೂಪ್​ ರೇವಣ್ಣ

ಮುಂದುವರೆದು, ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ. ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದೇನೆ. ನಾಲ್ಕು ವರ್ಷ ಹೋಗಿದ್ದೇ ಗೊತ್ತಾಗಲಿಲ್ಲ. ಏಕೆಂದರೆ, ಚಿತ್ರದ ಕೆಲಸ ಅಷ್ಟಿತ್ತು. ಬರೀ ನಟನಾಗಿಯಷ್ಟೇ ಅಲ್ಲ, ಒಬ್ಬ ಸಿನಿಮಾ ವಿದ್ಯಾರ್ಥಿಯಾಗಿ ಈ ಚಿತ್ರದಿಂದ ತುಂಬಾ ಕಲಿತಿದ್ದೇನೆ. ಇಡೀ ತಂಡ ಬಹಳ ಕಷ್ಟಪಟ್ಟು ಕೆಲಸ ಮಾಡಿದೆ. ಹಾಗಾಗಿಯೇ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಎಲ್ಲರ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದರು.

ಇದನ್ನೂ ಓದಿ: ಆಸ್ಕರ್​​ ಗೆದ್ದ ನಾಟು ನಾಟು: ಗೀತೆ ರಚನೆಕಾರ ಚಂದ್ರಬೋಸ್ ಎಕ್ಸ್​ಕ್ಲೂಸಿವ್ ಸಂದರ್ಶನ ಇಲ್ಲಿದೆ

ಕಬ್ಜ ಸಿನಿಮಾದಲ್ಲಿ ಮಾತ್ರವಲ್ಲದೇ 'ಹೈಡ್​ ಅಂಡ್​ ಸೀಕ್'​ ಎಂಬ ಇನ್ನೊಂದು ಚಿತ್ರದಲ್ಲೂ ಅನೂಪ್​ ನಟಿಸಿದ್ದಾರೆ. ಆ ಚಿತ್ರವೂ ಏಪ್ರಿಲ್​ನಲ್ಲಿ ಬಿಡುಗಡೆಯಾಗಲಿದೆಯಂತೆ. 'ಹೈಡ್​ ಅಂಡ್​ ಸೀಕ್' ಸಸ್ಪೆನ್ಸ್​ ಥ್ರಿಲ್ಲರ್​ ಚಿತ್ರವಾಗಿದ್ದು, ನೆಗೆಟಿವ್​ ಶೇಡ್​ ಇರುವ ಪಾತ್ರದಲ್ಲಿ ಅನೂಪ್​ ಕಾಣಿಸಿಕೊಂಡಿದ್ದಾರೆ. ಒಬ್ಬ ನಟನಾಗಿ ಎಲ್ಲಾ ರೀತಿಯ ಪಾತ್ರಗಳನ್ನು ಮಾಡುತ್ತಿರಬೇಕು, ಹೊಸ ಪ್ರಯೋಗಗಳನ್ನು ಮಾಡುತ್ತಿರಬೇಕು. ಅದಕ್ಕೆ ಸರಿಯಾಗಿ 'ಹೈಡ್​ ಅಂಡ್​ ಸೀಕ್​' ಚಿತ್ರದಲ್ಲೊಂದು ವಿಭಿನ್ನ ಪಾತ್ರ ನನಗೆ ಸಿಕ್ಕಿದೆ. ಇದರಲ್ಲಿ ಕಿಡ್ನಾಪರ್​ ಆಗಿ ಕಾಣಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಬೇರೆಬೇರೆ ತರಹದ ಪ್ರಯೋಗಗಳನ್ನು ಮಾಡುವ ಆಸೆ ಇದೆ ಎಂಬುದು ಅನೂಪ್​ ಅವರ ಮನದಾಳದ ಮಾತು.

ಈ ಎರಡು ಚಿತ್ರಗಳಲ್ಲದೇ ಒಂದಿಷ್ಟು ಕಥೆಗಳನ್ನು ಕೇಳಿದ್ದಾರಂತೆ ಅನೂಪ್​. ಆದರೆ ಅವರ ತಂದೆ ಎಚ್​ ಎಂ ರೇವಣ್ಣ ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ಮತ್ತು ಅವರ ಪರವಾಗಿ ಪ್ರಚಾರ ಮಾಡಬೇಕಿರುವುದರಿಂದ, ಈ ಎರಡೂ ಚಿತ್ರಗಳ ಬಿಡುಗಡೆಯ ನಂತರ ಒಂದು ಚಿಕ್ಕ ಗ್ಯಾಪ್​ ಪಡೆಯಲಿದ್ದಾರಂತೆ. ಆಮೇಲೆ ಪುನಃ ಇನ್ನಷ್ಟು ಚಿತ್ರಗಳಲ್ಲಿ ನಟಿಸುವ ಮೂಲಕ ಚಿತ್ರರಂಗದಲ್ಲಿ ತನ್ನದೇ ಛಾಫು ಮೂಡಿಸಲು ಅನೂಪ್ ರೆಡಿಯಾಗಿದ್ದಾರೆ.

ಇದನ್ನೂ ಓದಿ: ಹೆಸರು ಬದಲಾಯಿಸಿದ 'ಹೊಯ್ಸಳ'.. 'ಗುರುದೇವ ಹೊಯ್ಸಳ'ನಾಗಿ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.