ETV Bharat / entertainment

75ನೇ ಸ್ವಾತಂತ್ರ್ಯೋತ್ಸವ.. ವಂದೇ ಮಾತರಂ ಹಾಡಿನಲ್ಲಿ ಕನ್ನಡ ತಾರೆಯರ ಮೆರಗು

author img

By

Published : Aug 15, 2022, 12:24 PM IST

vande mataram  Patriotic Song
ವಂದೇ ಮಾತ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕನ್ನಡ ಚಿತ್ರರಂಗದ ಎಲ್ಲ ನಟರು ವಂದೇ ಮಾತರಂ ಎಂಬ ವಿಶೇಷ ಹಾಡೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿ, ಭಾರಿ ಸದ್ದು ಮಾಡುತ್ತಿದೆ.

ದೇಶಾದ್ಯಂತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ದೇಶಕ್ಕಾಗಿ ಹೋರಾಡಿದ ವೀರರು ಹಾಗು ಹೋರಾಟಗಾರರನ್ನ ಸ್ಮರಿಸಲಾಗುತ್ತಿದೆ. ಎಲ್ಲಿ ನೋಡಿದ್ರು ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಈ ಐತಿಹಾಸಿಕ ದಿನದ ಶುಭ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಎಲ್ಲ ನಟರು ವಂದೇ ಮಾತರಂ ವಿಶೇಷ ಹಾಡೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಪ್ರಖ್ಯಾತ ನಟರಾದ ಕಿಚ್ಚ ಸುದೀಪ್​, ಶಿವರಾಜ್​ಕುಮಾರ್​, ಜಗ್ಗೇಶ್​, ರಮೇಶ್​ ಅರವಿಂದ್​, ಅನಂತ್​ ನಾಗ್​, ರವಿಚಂದ್ರನ್, ಗಣೇಶ್, ಧನಂಜಯ್, ಧ್ರುವ ಸರ್ಜಾ, ಶ್ರೀಮುರಳಿ, ರಿಷಬ್​ ಶೆಟ್ಟಿ, ಅಜಯ್​ ರಾವ್​ ಸೇರಿದಂತೆ ಸಾಕಷ್ಟು ನಟರು 'ವಂದೇ ಮಾತರಂ' ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ತಾರೆಯರ ಜೊತೆಗೆ ಸಾಲುಮರದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ, ಮಾಜಿ ಕ್ರಿಕೆಟರ್​ ವೆಂಕಟೇಶ್​ ಪ್ರಸಾದ್​, ಹಿರಿಯ ಎಸ್​.ಎಲ್. ಭರಪ್ಪ ಸೇರಿದಂತೆ ಸಾಕಷ್ಟು ಗಣ್ಯರು ಇದ್ದಾರೆ.

ವಂದೇ ಮಾತರಂ ಹಾಡಿನಲ್ಲಿ ಕನ್ನಡ ತಾರೆಯರ ಮೆರಗು

‌ಈ ಗೀತೆಯನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್‌ ನಿರ್ದೇಶನ ಮಾಡಿದ್ದು, ಪ್ರಸಿದ್ಧ ಗಾಯಕ ವಿಜಯ್​ ಪ್ರಕಾಶ್​ ಹಾಡಿದ್ದಾರೆ. ಸದ್ಯಕ್ಕೆ ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿದ್ದು, ಭಾರಿ ಸದ್ದು ಮಾಡುತ್ತಿದೆ.

75ನೇ ಸ್ವಾತಂತ್ರ್ಯೋತ್ಸವ ತ್ರಿವರ್ಣ ಧ್ವಜಕ್ಕಾಗಿ ಮಾಡಿರುವ ಈ ಹಾಡು ಚೆನ್ನಾಗಿ ಮೂಡಿ ಬಂದಿದೆ. ಆದರೆ, ಹಾಡಿನಲ್ಲಿ ಯಾಕೆ‌ ನಟಿಯರಿಲ್ಲ. ಬೇರೆ ಕ್ಷೇತ್ರದ ಸಾಧಕರನ್ನು ಯಾಕೆ ಬಳಸಿಕೊಂಡಿಲ್ಲ ಅಂತಾ ಜನರು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಅಮೃತ ಮಹೋತ್ಸವ.. ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.