ETV Bharat / entertainment

ಹರ್ಷಿಕಾ, ರಾಧಿಕಾ 'ಸಂಕ್ರಾಂತಿ ತಕಥೈ': ಹಬ್ಬಕ್ಕೆ ವಿಶೇಷ ಹಾಡು ಬಿಡುಗಡೆ

author img

By

Published : Jan 9, 2023, 1:26 PM IST

ಸಂಕ್ರಾಂತಿ ಸಂಭ್ರಮ ಹೆಚ್ಚಿಸಲು ಬರುತ್ತಿದ್ದಾರೆ ಹರ್ಷಿಕಾ, ರಾಧಿಕಾ; ಹಬ್ಬದ ಕಳೆಕಟ್ಟಲಿದೆ ಈ ವಿಶೇಷ ಹಾಡು
kannada-special-song-for-sankranthi-festival

ಸಂಕ್ರಾಂತಿಗೆಂದು ವಿಶೇಷ ಹಾಡು ಸಿದ್ಧಪಡಿಸಲಾಗಿದೆ. ಕನ್ನಡ ನಟರಾದ ಹರ್ಷಿಕಾ, ರಾಧಿಕಾ ಮತ್ತು ಪೃಥ್ವಿ ಅಂಬರ್​​ ಅಭಿನಯಿಸಿರುವ ಹಾಡು ಪ್ರೇಕ್ಷಕರ ಮನಸೆಳೆಯುತ್ತಿದೆ.

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಎದುರಾಗುವ ಹಬ್ಬ ಎಂದರೆ ಅದು ಸಂಕ್ರಾಂತಿ. ಈ ಸಂಕ್ರಮಣ ಹಬ್ಬ ಅಂದ್ರೆ ಸಂಭ್ರಮ. ಸಂಭ್ರಮ ಅಂದ್ಮೇಲೆ ಒಂದಿಷ್ಟು ಆತ್ಮೀಯರು ಸೇರಬೇಕು. ಎಲ್ಲರೂ ಸೇರಿದಾರೆ ಅಂದ್ರೆ ಅಲ್ಲೊಂದು ಚೆಂದದ ಹಾಡು ಇರ್ದಿದ್ರೆ ಹೇಗೆ?. ಇನ್ನೇನು ಕೆಲವೇ ದಿನ ಸಂಕ್ರಾಂತಿ ಹಬ್ಬ ಬರುತ್ತಿದೆ. ಸಂಕ್ರಾಂತಿ ಹಬ್ಬಕ್ಕೆ ಒಂದು ಚೆಂದದ ಸಾಂಗ್ ಇದ್ರೆ ಎಷ್ಟು ಚೆನ್ನಾಗಿರುತ್ತೆ ಅಲ್ವಾ ಎಂದು ಯೋಚಿಸುವ ಮಂದಿ ಹಲವು. ಇಂತಹ ಆಲೋಚನೆಯಲ್ಲೇ ಹಾಡೊಂಡು ಸಿದ್ಧವಾಗಿ ಬಿಡುಗಡೆಯಾಗಿದೆ. ಒಂದಿಷ್ಟು ಸಂಗೀತಪ್ರಿಯ ಮನಸ್ಸುಗಳು ಒಟ್ಟಿಗೆ ಸೇರಿ ಸಂಕ್ರಾಂತಿ ಹಬ್ಬಕೆಂದು ಹೊಸ ಹಾಡೊಂದನ್ನು ರಚಿಸಿ ಬಿಡುಗಡೆ ಮಾಡಿದ್ದಾರೆ.

  • " class="align-text-top noRightClick twitterSection" data="">

ಸಂಕ್ರಾಂತಿ ಹಬ್ಬದಂದು ಅನೇಕ ಚಿತ್ರಗಳು ಬಿಡುಗಡೆಯಾಗುವುದು ಸಾಮಾನ್ಯ. ಆದರೆ, ಇದೇ ಮೊದಲ ಬಾರಿ ಎಂಬಂತೆ ಸಂಕ್ರಾಂತಿ ಹಬ್ಬಕ್ಕಾಗಿ ಹಳ್ಳಿ ಸೊಗಡಿನ ಹಾಡೊಂದು ಕನ್ನಡದಲ್ಲಿ ಸಿದ್ಧಪಡಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೆಂದೇ ವಿಶೇಷವಾಗಿ ರಚಿಸಲಾದ ‘ಸಂಕ್ರಾಂತಿ ತಕಥೈ’ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲಿ ಈ ಹಾಡು ಮೂಡಿ ಬಂದಿದೆ. ಈ ಹಾಡಿಗೆ ಹರ್ಷಿಕಾ ಪೂಣಚ್ಚ, ರಾಧಿಕಾ ನಾರಾಯಣ್, ಪೃಥ್ವಿ ಅಂಬರ್ ಹಾಗೂ ತೆಲುಗಿನ ಮಾನಸ್ ನಗುಲಪಲ್ಲಿ, ಕೀರ್ತಿ ಭಟ್, ನಿಖಿಲ್ ಮಲಿಯಕ್ಕಳ್ ಹೆಜ್ಜೆ ಹಾಕಿದ್ದಾರೆ. ಖ್ಯಾತ ನಟ ಡಾ.ರಮೇಶ್ ಅರವಿಂದ್ ಅವರು ಸ್ಪೆಷಲ್ ಅಪಿಯರೆನ್ಸ್ ಇರುವ ಈ ಹಾಡು ಬಿಡುಗಡೆಯಾಗಿ ಸಂಕ್ರಾಂತಿ ಹಬ್ಬದ ರಂಗು ಹೆಚ್ಚಿಸಿದೆ.

ತೆಲುಗಿನ ಖ್ಯಾತ ಹಾಗೂ ಹಿರಿಯ ನೃತ್ಯ ನಿರ್ದೇಶಕಿ ಆನಿ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ 'ಸಂಕ್ರಾಂತಿ ತಕಥೈ' ಹಾಡು ಮೂಡಿ ಬಂದಿದೆ. ಗಾಯಕಿ ಹಾಗೂ ‘ಎದೆ ತುಂಬಿ ಹಾಡುವೆನು' ಖ್ಯಾತಿಯ ಲಕ್ಷ್ಮೀ ಹೊಯ್ಸಳ್ ಹಾಗೂ ಶ್ರೀನಿವಾಸ್ ನಾಯಕ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಮಲಯಾಳಂ ಸಂಗೀತ ನಿರ್ದೇಶಕ ಅನೂಪ್ ಮೆನನ್ ಸಂಗೀತ ನಿರ್ದೇಶನ ಹಾಡಿಗಿದ್ದು, ಅನೂಪ್ ಮೆನನ್ ಹಾಗೂ ಲಕ್ಷ್ಮೀ ಹೊಯ್ಸಳ್ ಹಾಡಿಗೆ ದನಿಯಾಗಿದ್ದಾರೆ.

ಶರದ್ ಗುಮಾಸ್ತೆ ಅವರ ರೆಡ್ ಸೀಡರ್ ಎಂಟಟೈನ್ಮೆಂಟ್ ಬ್ಯಾನರ್ ಅಡಿ ‘ಸಂಕ್ರಾಂತಿ ಥಕಥೈ’ ಹಾಡನ್ನು ನಿರ್ಮಾಣ ಮಾಡಿದ್ದು, ಜಯ್ ಸಿರಿಕೊಂಡ ಛಾಯಾಗ್ರಹಣ, ಪ್ರಭು ಸಂಕಲನ ಹಾಡಿಗಿದೆ.ರೆಡ್ ಸೀಡರ್ ಎಂಟರ್​​ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಈ ಹಾಡು ಬಿಡುಗಡೆಯಾಗಿ ಎಲ್ಲರ ಗಮನ ಸೆಳೆಯುತ್ತಿದೆ. ಗ್ರಾಮೀಣ ಸೊಗಡಿನ ಸಂಕ್ರಾಂತಿ ವಿಶೇಷತೆ ಹೊಂದಿರುವ ಹಾಡು ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.

ಇದನ್ನೂ ಓದಿ: ಯಶ್ ಜನ್ಮದಿನ: ರಾಕಿಂಗ್​ ಸ್ಟಾರ್​​ ಜೊತೆ ಹೊಸ ಸಿನಿಮಾ ಮಾಡಲಿರುವ ಹೊಂಬಾಳೆ ಫಿಲ್ಸ್ಮ್?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.