ETV Bharat / entertainment

ಕಾಂತಾರ 2 ಚಿತ್ರ ನಿರ್ಮಾಣಕ್ಕೆ ಸಿಕ್ತು ದೈವದ ಆಶೀರ್ವಾದ?

author img

By

Published : Jan 21, 2023, 7:28 PM IST

Kantara
ಕಾಂತಾರ

ಚಿತ್ರತಂಡದಿಂದ ಅಧಿಕೃತ ಘೋಷಣೆ ಇಲ್ಲದಿದ್ದರೂ ಕಾಂತಾರ 2 ಸಿನಿಮಾ ಬಗ್ಗೆ ನಿರೀಕ್ಷೆಗಳು ಹುಟ್ಟಿಕೊಂಡಿವೆ..

ಭಾರತೀಯ ಚಿತ್ರರಂಗ ಅಲ್ಲದೇ ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಚಿತ್ರ ಕಾಂತಾರ. ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶನ ಮಾಡಿದ ಈ ಸಿನಿಮಾ ಕಳೆದ ವರ್ಷ ಬ್ಲಾಕ್‌ ಬಸ್ಟರ್ ಹಿಟ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಕರಾವಳಿ ಭಾಗದ ದೈವಾರಾಧನೆ ಕಥೆ ಹೊಂದಿದ್ದ ಕಾಂತಾರ ಸಿನಿಮಾ ಭಾರತೀಯ ಚಿತ್ರರಂಗದ ದಿಗ್ಗಜರಿಂದ ಅಪಾರ ಮೆಚ್ಚುಗೆ ಪಡೆಯಿತು. ಇದೀಗ ಕಾಂತಾರ 2 ಚಿತ್ರ ಬರಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಅಧಿಕೃತ ಘೋಷಣೆ ಇಲ್ಲದಿದ್ದರೂ ಕಾಂತಾರ 2 ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ.

ಪಂಜುರ್ಲಿ ಕೋಲ ಕೊಟ್ಟು ಹರಕೆ ಸಲ್ಲಿಕೆ : ಹೌದು, ಒಂದು ಕಾಲದಲ್ಲಿ ನಟ ರಿಷಬ್ ಶೆಟ್ಟಿ ಚಿತ್ರಕ್ಕೆ 5 ಕೋಟಿ ಬಜೆಟ್ ಕೊಡಲು ಯೋಚಿಸುತ್ತಿದ್ದ ನಿರ್ಮಾಪಕ‌ರು ಇದೀಗ ರಿಷಬ್ ಅವರ ಚಿತ್ರಕ್ಕೆ 100 ಕೋಟಿ ಬಂಡವಾಳ ಹೂಡಲು ನಾ ಮುಂದು ತಾ ಮುಂದು ಅಂತಿದ್ದಾರೆ. ಅದಕ್ಕೆ ಕಾರಣ ಕಾಂತಾರ ಸಿನಿಮಾ ಮಾಡಿದ ದಾಖಲೆಗಳು. ಕನ್ನಡ ಅಲ್ಲದೇ, ತೆಲುಗು, ಹಿಂದಿ, ತಮಿಳು ಹಾಗು ಮಲಯಾಳಂ ಭಾಷೆಗೆ ಡಬ್ಬಿಂಗ್ ಆಗಿ ಬರೋಬ್ಬರಿ 450 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ರಿಷಬ್ ಶೆಟ್ಟಿ ಅವರನ್ನು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಾಡಿತು. ಈ ಯಶಸ್ಸಿನ ಉತ್ತುಂಗದಲ್ಲಿರುವ ನಟ ರಿಷಬ್ ಶೆಟ್ಟಿ ಹಾಗು ಹೊಂಬಾಳೆ ಫಿಲ್ಸ್ಮ್ ಸಂಸ್ಥೆ ನಿರ್ಮಾಪಕ ವಿಜಯ್ ಕಿರಂಗದೂರ್ ಕರಾವಳಿ ಭಾಗದಲ್ಲಿ ಪಂಜುರ್ಲಿ ಕೋಲ ಕೊಟ್ಟು ಹರಕೆ ತೀರಿಸಿದ್ದಾರೆ.

ಕಾಂತಾರ 2 ಸಿನಿಮಾಗೆ ದೈವದ ಆಶೀರ್ವಾದ?: ಈ ಸಮಯದಲ್ಲಿ ಕಾಂತಾರ 2 ಸಿನಿಮಾ ಮಾಡುವ ಬಗ್ಗೆ ಚಿತ್ರತಂಡ ದೈವದ ಬಳಿ ಕೇಳಿದೆ. ಅದಕ್ಕೆ ದೈವವು ಕೂಡ ಕಾಂತಾರ 2 ಸಿನಿಮಾ ಮಾಡೋದಿಕ್ಕೆ ಆರ್ಶೀವಾದ ಮಾಡಿದೆ ಅಂತಾ ರಿಷಬ್ ಶೆಟ್ಟಿ ಆಪ್ತರ ವಲಯದಿಂದ ಮಾತುಗಳು ಕೇಳಿ ಬಂದಿವೆ. ಈ ಹಿಂದೆ ರಿಷಬ್ ಶೆಟ್ಟಿ ಅವರಿಗೆ ಕಾಂತಾರ 2 ಸಿನಿಮಾ ಮಾಡ್ತೀರಾ ಎಂಬ ಪ್ರಶ್ನೆಗಳು ಎದುರಾಗಿದ್ದವು. ಆಗ ರಿಷಬ್ ಶೆಟ್ಟಿ ದೈವದ ಇಚ್ಛೆ ಎಂದು ನಗುತ್ತಲೇ ಉತ್ತರಿಸಿದ್ದರು.

ಇದನ್ನೂ ಓದಿ: ಸಿನಿಮಾ ಸಕ್ಸಸ್: ದೈವಕ್ಕೆ ಹರಕೆ ತೀರಿಸಿದ ಕಾಂತಾರ ಚಿತ್ರತಂಡ

ಕಾಂತಾರ 2 ಸಿನಿಮಾಗೆ ತಯಾರಿ? ಇದಾದ ಬಳಿಕ ನಿರ್ಮಾಪಕ ವಿಜಯ್ ಕಿರಗಂದೂರು ಬಳಿ ಕಾಂತಾರ 2 ಚಿತ್ರವನ್ನು ಮಾಡುವ ಯೋಚನೆ ಇದೆಯಾ ಅಂತಾ ಕೇಳಿದಾಗ ಹೌದು ಕಾಂತಾರ 2 ಚಿತ್ರ ಮಾಡುವ ಯೋಚನೆ ಇದೆ ಅಂತಾ ಸಂದರ್ಶನವೊಂದರಲ್ಲಿ ಸುಳಿವು ನೀಡಿದ್ದರು. ರಿಷಬ್ ಶೆಟ್ಟಿ ಅವರೊಂದಿಗೆ ಕಾಂತಾರ 2 ಸಿನಿಮಾದ ಕಥೆ ಮಾಡುವ ಬಗ್ಗೆ ಚರ್ಚೆ ಆಗಿದೆ. ರಿಷಬ್ ಪ್ರತಿ ಬಾರಿಯೂ ವಿಭಿನ್ನ ಕಥೆ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ಸದ್ಯ ಚಿತ್ರದ ಕಥೆ ಬರೆಯುತ್ತಿದ್ದಾರೆ. ತನ್ನ ಸಹ ಬರಹಗಾರರ ಜತೆ ಕರ್ನಾಟಕ ಕರಾವಳಿ ಕಾಡಿನ ಒಳಗೆ ಹೋಗಿ ಸಂಶೋಧನೆ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಕೆಲ ಭಾಗವನ್ನು ಚಿತ್ರೀಕರಣ ಮಾಡುವ ಯೋಚನೆ ಇದೆ. ಈ ಸಿನಿಮಾವನ್ನು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ 2024ರ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಬಿಡುಗಡೆ ಮಾಡುವ ಪ್ಲಾನ್​ನಲ್ಲಿ ನಿರ್ಮಾಪಕ ವಿಜಯ್‌ ಕಿರಗಂದೂರು ಸಿದ್ಧತೆ ನಡೆಸಿದ್ದಾರೆ ಅಂತಾ ಹೇಳಲಾಗುತ್ತಿದೆ.

ಇದನ್ನೂ ಓದಿ: ಯಶಸ್ವಿ ಸಿನಿಮಾಗೆ 'ಕಾಂತಾರ'ವನ್ನು ಉದಾಹರಣೆಯಾಗಿ ಕೊಟ್ಟ ನಟ ಶಾಹಿದ್ ಕಪೂರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.