ಪಾಂಡವಪುರದಲ್ಲಿ 3 ದಿನ ಪುನೀತೋತ್ಸವ: ಇಂದು ನಿಖಿಲ್​ ಕುಮಾರಸ್ವಾಮಿ ಚಾಲನೆ

author img

By

Published : Nov 25, 2022, 10:59 AM IST

Updated : Nov 25, 2022, 12:34 PM IST

Three days puneethothsava

ಪುನೀತೋತ್ಸವದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ವಿಜಯ್‌ ಪ್ರಕಾಶ್ ಹಾಗೂ ಗಾಯಕಿ ಅನನ್ಯ ಭಟ್ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಮಂಡ್ಯ: ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿರುವ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪುನೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಂಜೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಹಲವು ನಟ ಮತ್ತು ನಟಿಯರು ಭಾಗಿಯಾಗುವರು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ವಿಜಯ್‌ ಪ್ರಕಾಶ್ ಹಾಗೂ ಗಾಯಕಿ ಅನನ್ಯ ಭಟ್ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮವಿರಲಿದೆ. ಅಲ್ಲದೇ, ಖ್ಯಾತ ಹಾಸ್ಯನಟರಿಂದ ಹಾಸ್ಯ ಸಂಜೆ ನಡೆಯಲಿದೆ.

ಇಂದಿನಿಂದ ಮೂರು ದಿನ ಪುನೀತೋತ್ಸವ

ಅಪ್ಪು ಉತ್ಸವದ ತಯಾರಿ ಅದ್ಧೂರಿಯಾಗಿದ್ದು ಫ್ಲೆಕ್ಸ್ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ. ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವಂತೆ ಶಾಸಕ ಪುಟ್ಟರಾಜು ಪಾಂಡವಪುರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪವರ್ ಸ್ಟಾರ್ ಆದರ್ಶದ ಹಾದಿಯಲ್ಲಿ ಗೋಲ್ಡನ್ ಸ್ಟಾರ್.. ಗಣೇಶ್ ಬಗ್ಗೆ ರಂಗಾಯಣ ರಘು ಗುಣಗಾನ

Last Updated :Nov 25, 2022, 12:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.