ETV Bharat / entertainment

ಚಿಕ್ಕಬಳ್ಳಾಪುರ ಆದಿಯೋಗಿ ಪ್ರತಿಮೆಯ ದರ್ಶನ ಪಡೆದ ಸೂಪರ್ ಸ್ಟಾರ್ ರಜನಿಕಾಂತ್

author img

By

Published : Feb 18, 2023, 2:09 PM IST

Updated : Feb 18, 2023, 3:13 PM IST

Rajinikanth visits Chikkaballapur
ಸೂಪರ್ ಸ್ಟಾರ್ ರಜನಿಕಾಂತ್

ನಟ ರಜನಿಕಾಂತ್ ಅವರು ಚಿಕ್ಕಬಳ್ಳಾಪುರದ ಅವಲಗುರ್ಕಿ ಬಳಿ ಇರುವ ಆದಿಯೋಗಿ ಪ್ರತಿಮೆಯ ದರ್ಶನ ಪಡೆದಿದ್ದಾರೆ.

ಚಿಕ್ಕಬಳ್ಳಾಪುರ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಚಿಕ್ಕಬಳ್ಳಾಪುರದಲ್ಲಿರುವ ಆದಿಯೋಗಿ ಪ್ರತಿಮೆ ಬಳಿ ಸದ್ದಿಲ್ಲದೇ ಭೇಟಿ ನೀಡಿ ಶಿವನ ದರ್ಶನ ಪಡೆದಿದ್ದಾರೆ. ಇಶಾ ಕೇಂದ್ರದ ಸದ್ಗುರು ಜಗ್ಗಿ ವಾಸುದೇವ್ ಅವರು ತಮಿಳುನಾಡಿನ ಕೊಯಮುತ್ತೂರು ಬಳಿ ಸ್ಥಾಪಿಸಿರುವ ಆದಿಯೋಗಿ ಮಾದರಿಯಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಬಳಿ 112 ಎತ್ತರದ ಆದಿಯೋಗಿ ಪ್ರತಿಮೆ ಇದೆ. ಪ್ರತಿಮೆಯನ್ನು ಆಂಧ್ರ ಗಡಿಭಾಗದಲ್ಲಿ ಸ್ಥಾಪಿಸಲಾಗಿದ್ದು, ಆಂಧ್ರ ಮತ್ತು ಕರ್ನಾಟಕದವರಿಗೆ ಪ್ರವಾಸಿ ತಾಣವಾಗಿ ರೂಪುಗೊಂಡಿದೆ. ಮಕರ ಸಂಕ್ರಾಂತಿ ಹಬ್ಬದ ದಿನ ಚಿಕ್ಕಬಳ್ಳಾಪುರ ಬಳಿ ಅವಲಗುರ್ಕಿ ಸಮೀಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಪ್ರತಿಮೆ ಲೋಕಾರ್ಪಣೆಗೊಂಡಿದೆ.

Rajinikanth visits Chikkaballapur
ಸಹೋದರನ ಜೊತೆ ರಜನಿಕಾಂತ್

ಆದಿಯೋಗಿ ಶಿವನ ದರ್ಶನ ಪಡೆಯಲು ಸದ್ದಿಲ್ಲದೇ ಚಿಕ್ಕಬಳ್ಳಾಪುರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಶುಕ್ರವಾರ ಭೇಟಿ ನೀಡಿದ್ದರು. ತಮ್ಮ ಸಹೋದರನ ಜೊತೆ ಭೇಟಿ ಕೊಟ್ಟ ನಟ ಆದಿಯೋಗಿ ಶಿವನ ಮುಂದೆ ಪ್ರಾಥನೆ ಸಲ್ಲಿಸಿದರು. ಬಳಿಕ ಅಲ್ಲಿಂದ ವಾಪಸ್​ ಆಗುವ ಸಂದರ್ಭದಲ್ಲಿ ಸ್ಥಳೀಯರು ನಟ ರಜನಿ ಅವರನ್ನು ಗುರುತಿಸಿದ್ದಾರೆ.

ವಿಶ್ವದ ಅತೀ ದೊಡ್ಡ ಆದಿಯೋಗಿ ಪ್ರತಿಮೆಯು ಪಕ್ಕದ ತಮಿಳುನಾಡು ರಾಜ್ಯದ ಕೊಯಮತ್ತೂರಿನಲ್ಲಿದೆ. ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಅದೇ ಮಾದರಿಯ ಪ್ರತಿಮೆ ಸ್ಥಾಪಿಸಲಾಗಿದೆ. 112 ಅಡಿ ಎತ್ತರವಿರುವ ಈ ಪ್ರತಿಮೆಯನ್ನು ಮಕರ ಸಂಕ್ರಾಂತಿಯ ಶುಭದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದ್ದಾರೆ. ಹಬ್ಬದ ದಿನದಂದೇ ಪ್ರತಿಮೆಯ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದರು. ಚಿಕ್ಕಬಳ್ಳಾಪುರದ ಅವಲಗುರ್ಕಿ ಬಳಿ ಇರುವ ಈ ಆದಿಯೋಗಿ ಮೂರ್ತಿಯನ್ನು ಈಶ ಫೌಂಡೇಶನ್​ ನಿರ್ಮಿಸಿದೆ. ಈ ಸ್ಥಳಕ್ಕೆ ಸದ್ಗುರು ಸನ್ನಿಧಿ ಎಂದು ಹೆಸರಿಡಲಾಗಿದೆ.

ಜೈಲರ್ ಸಿನಿಮಾದ ಚಿತ್ರೀಕರಣ ಮಂಗಳೂರಿನ ಹೊರವಲಯದಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ನಡೆಯುತ್ತಿದ್ದ ಹಿನ್ನೆಲೆ ಕಳೆದ ಭಾನುವಾರ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದರು. ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ ಸುಮಾರ 9 ಗಂಟೆ ಸುಮಾರಿಗೆ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ- ವಿಡಿಯೋ

ಬಹುಬೇಡಿಕೆ ನಟ ರಜನಿಕಾಂತ್ ಅಭಿನಯದ ಈ ಜೈಲರ್​ ಸಿನಿಮಾಗೆ ನೆಲ್ಸನ್​ ದೀಲಿಪ್​ ಕುಮಾರ್​ ಆದ್ಯಕ್ಷನ್​ ಕಟ್​​ ಹೇಳುತ್ತಿದ್ದಾರೆ. ಶಿವರಾಜ್​ ಕುಮಾರ್​, ರಮ್ಯಾ ಕೃಷ್ಣನ್​, ವಸಂತ್​ ರವಿ, ಯೋಗಿ ಬಾಬು ಮತ್ತು ವಿನಾಯಕನ್​ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ​​ ರವಿಚಂದ್ರನ್ ಸಂಗೀತ ಇದ್ದು, ವಿಜಯ್​ ಕಾರ್ತಿಕ್​ ಕನ್ನನ್​ ಫೋಟೋಗ್ರಾಫಿ ಇದೆ. ನಿರ್ಮಲ ಸಂಕಲನ ಈ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರ ಬಿಡುಗಡೆ ಅಗಲಿದೆ.

ಇದನ್ನೂ ಓದಿ: 'ನಮಾಮಿ ನಮಾಮಿ'...ನಟರಾಜನಿಗೆ ಭಕ್ತಿ ಅರ್ಪಿಸಿದ ಶ್ರೀಯಾ ಶರಣ್

ಜೈಲರ್​ ಚಿತ್ರ ಅಲ್ಲದೇ ಪುತ್ರಿ ಐಶ್ವರ್ಯ ನಿರ್ದೇಶನದ ಲಾಲ್ ಸಲಾಂ ಚಿತ್ರದಲ್ಲೂ ನಟ ರಜನಿಕಾಂತ್ ಅತಿಥಿ ಪಾತ್ರ ವಹಿಸಲಿದ್ದಾರೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ಲಾಲ್ ಸಲಾಮ್ ನಿರ್ಮಿಸುತ್ತಿದೆ. ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ನಟಿಸಲಿದ್ದಾರೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಲೈಕಾ ಪ್ರೊಡಕ್ಷನ್ ಬ್ಯಾನರ್ ಅಡಿ ಶ್ರೀಧರ್ ಪಿಲ್ಲೈ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Last Updated :Feb 18, 2023, 3:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.