ವಿರಾಟಪುರ ವಿರಾಗಿ ಟ್ರೈಲರ್ ಬಿಡುಗಡೆ

author img

By

Published : Jan 1, 2023, 7:48 PM IST

Updated : Jan 1, 2023, 8:07 PM IST

Viratapura Viragi trailer release

ವಿರಾಟಪುರ ವಿರಾಗಿ ಟ್ರೈಲರ್ ಬಿಡುಗಡೆ-ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ-ಸ್ವಾಮೀಜಿಗಳ ಜೀವನ ಚರಿತ್ರೆಯನ್ನು ಜಗತ್ತಿಗೆ ಸಾರುವ ಪ್ರಯತ್ನ

ವಿರಾಟಪುರ ವಿರಾಗಿ ಟ್ರೈಲರ್ ಬಿಡುಗಡೆ ಸಮಾರಂಭ

ಗದಗ: ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇಂದು ನಡೆಯಿತು. ಉತ್ತರ ಕರ್ನಾಟಕದ ವಟುಗಳ ಪಿತಾಮಹ ಶಿವಯೋಗ ಮಂದಿರದ ಜಗದ್ಗುರು ಹಾನಗಲ್ ಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಜಗತ್ತಿಗೆ ಸಾರುವ ಪ್ರಯತ್ನ ಇದಾಗಿದ್ದು ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಸೇರಿದಂತೆ ಹಲವು ಸ್ವಾಮೀಜಿಗಳು, ನಟ ನಟಿಯರು ಭಾಗಿಯಾಗಿದ್ದರು.

ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿ, ನಮ್ಮ ನಾಡಿನ ಯುಗಪುರುಷರು, ಸ್ವಾಮೀಜಿಗಳು ತ್ರಿವಿಧ ದಾಸೋಹದ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ. ಹಾನಗಲ್ ಗುರುಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಚಲನಚಿತ್ರವನ್ನಾಗಿ ಮಾಡಿರುವುದು ಸಂತಸದ ವಿಷಯವಾಗಿದೆ. ಕುಮಾರ ಶಿವಯೋಗಿಗಳು ನಡೆದು ಬಂದ ಹಾದಿ, ಸಮಾಜಕ್ಕೆ ನೀಡಿದ ಉತ್ತಮ ಸಂದೇಶ, ನೀತಿ ಪಾಠಗಳನ್ನು ಯವಕರಿಗೆ ತಲುಪಿಸುವ ಉದ್ದೇಶದಿಂದ ನಿರ್ಮಾಣ ಮಾಡಿರುವ ವಿರಾಟಪುರ ವಿರಾಗಿ ಚಲನಚಿತ್ರ ರಾಜ್ಯ, ದೇಶದ ಜನರ ಮನೆಮನ ತಲುಪಲಿ ಎಂದು ಹಾರೈಸಿದರು.

  • " class="align-text-top noRightClick twitterSection" data="">

ಇದನ್ನೂ ಓದಿ: 'ಕೆ ಡಿ' ರವಿಚಂದ್ರನ್ ಫಸ್ಟ್ ಲುಕ್ ರಿವೀಲ್​.. ಭರ್ಜರಿಯಾಗಿದೆ ಕ್ರೇಜಿಸ್ಟಾರ್​ ಡಿಫರೆಂಟ್​ ಲುಕ್​

ಜಡೆಯ ಶಾಂತಲಿಂಗ ಶ್ರೀಗಳು, ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ, ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಉಪಸ್ಥಿತರಿದ್ದರು. ನಿರ್ದೇಶಕ ಬಿ.ಎಸ್. ಲಿಂಗದೇವರು, ನಟ ಸುಚೇಂದ್ರಪ್ರಸಾದ್, ಸಂಗೀತ ನಿರ್ದೇಶಕ ಮಣಿಕಾಂತ ಖದ್ರಿ, ಸಚಿವ ಸಿ ಸಿ ಪಾಟೀಲ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Last Updated :Jan 1, 2023, 8:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.