ETV Bharat / jagte-raho

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಮೂವರಿಗೆ ಗಾಯ

author img

By

Published : Oct 25, 2020, 4:34 AM IST

ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದಾನೆ. ಮುತ್ತು ರುದ್ರಗಂಟಿ, ಬಸಯ್ಯ ತೆಗ್ಗಿನಮಠ ಪೈಕಿ ಚಾಲಕ ಬಸಯ್ಯ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

accident
ಅಪಘಾತ

ಮುದ್ದೇಬಿಹಾಳ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಘಟನೆಯು ತಾಲೂಕಿನ ಹಿರೇಮುರಾಳ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವ ನಾಲತವಾಡನ ವೀರೇಶ್​ ಪೇಟಕರ (29) ಎಂದು ಗುರುತಿಸಲಾಗಿದೆ.

ಗಾಯಾಳುಗಳಾದ ಮುತ್ತು ರುದ್ರಗಂಟಿ, ಬಸಯ್ಯ ತೆಗ್ಗಿನಮಠ ಪೈಕಿ ಚಾಲಕ ಬಸಯ್ಯನ ಸ್ಥಿತಿ ಗಂಭೀರವಾಗಿದೆ. ಮುದ್ದೇಬಿಹಾಳದಿಂದ ನಾಲತವಾಡಕ್ಕೆ ತೆರಳುತ್ತಿದ್ದಾಗ, ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿ ಮರಕ್ಕೆ ಗುದ್ದಿದೆ.

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪಿಎಸ್​ಐ ಮಲ್ಲಪ್ಪ ಮಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.