'ಇದು ನನ್ನ ಪೂರ್ವ ಜನ್ಮದ ಪುಣ್ಯ, ಶ್ರೀರಾಮನಿಗೆ ಜಯವಾಗಲಿ': ಆಹ್ವಾನ ಸ್ವೀಕರಿಸಿದ ರಿಷಬ್ ಶೆಟ್ಟಿ ಸಂತಸ
![ETV Bharat Karnataka Team author img](https://etvbharatimages.akamaized.net/etvbharat/prod-images/authors/karnataka-1716535795.jpeg?imwidth=128)
Published : Jan 20, 2024, 2:32 PM IST
!['ಇದು ನನ್ನ ಪೂರ್ವ ಜನ್ಮದ ಪುಣ್ಯ, ಶ್ರೀರಾಮನಿಗೆ ಜಯವಾಗಲಿ': ಆಹ್ವಾನ ಸ್ವೀಕರಿಸಿದ ರಿಷಬ್ ಶೆಟ್ಟಿ ಸಂತಸ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸ್ವೀಕರಿಸಿದ ರಿಷಬ್ ಶೆಟ್ಟಿ](https://etvbharatimages.akamaized.net/etvbharat/prod-images/20-01-2024/1200-675-20553136-thumbnail-16x9-newss.jpg?imwidth=3840)
ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಆಹ್ವಾನ ಸ್ವೀಕರಿಸಿದ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮನಾಮವ ಭಜಿಸುತ್ತಾ, ರಾಮಪ್ರೇಮವ ಭುಜಿಸುತ್ತಾ, ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರುಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಶ್ರೀರಾಮ ಅಯೋಧ್ಯೆಗೆ ಬರುವಂತೆ ಕರೆ ಕಳುಹಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ. ಶ್ರೀರಾಮನಿಗೆ, ಅಯೋಧ್ಯೆಗೆ ಜಯವಾಗಲಿ ಎಂದು ಬರೆದುಕೊಂಡಿದ್ದಾರೆ.