ಹಾಸ್ಯ ನಟ ಬುಲೆಟ್ ಪ್ರಕಾಶ್ ಮಗನ ಮೇಲೆ‌ ಮಂಗಳಮುಖಿಯರಿಂದ ದಾಳಿ ?

author img

By

Published : Sep 8, 2021, 9:25 AM IST

attack-on-bullet-prakash-son-in-bengaluru

ಹಾಸ್ಯನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಹಾಸ್ಯನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ 9 ಗಂಟೆಗೆ ಜಿಮ್​ನಿಂದ ಮನೆಗೆ ವಾಪಸ್​ ಆಗುತ್ತಿದ್ದ ರಕ್ಷಕ್ ಮೇಲೆ ಹೆಬ್ಬಾಳ ಬಳಿ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹೆಬ್ಬಾಳ ಪ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದಿದ್ದಾರೆ. ಆಗ ರಕ್ಷಕ್ ಬೈಕ್​​ನಿಂದ ಕೆಳಗೆ ಬಿದ್ದಿದ್ದು, ಕಾಲಿಗೆ ತರಚಿದ ಗಾಯಗಳಾಗಿವೆ. ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆಯೇ ಬೈಕ್ ಬಿಟ್ಟು ಓಡಿಹೋಗಿದ್ದಾನೆ ಎಂದು ತಿಳಿದು ಬಂದಿದೆ.

ಬಳಿಕ ಹೆಬ್ಬಾಳ ಪೊಲೀಸರ ಸಹಾಯದಿಂದ ರಕ್ಷಕ್ ತನ್ನ ಬೈಕ್ ತೆಗೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಇದನ್ನೂ ಓದಿ: ಬೆಳಗಾವಿ ಮೇಯರ್ - ಉಪಮೇಯರ್ ಆಯ್ಕೆ ಕಸರತ್ತು: ದಿಢೀರ್ ಬೆಂಗಳೂರಿಗೆ ತೆರಳಿದ ಅಭಯ್ ಪಾಟೀಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.