ಮುಂಬೈ: ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ರಾಹುಲ್ ದ್ರಾವಿಡ್ ಅವರು ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಬೂಮ್ರಾ ಅವರಿಗೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ ಫಿಟ್ನೆಸ್ ಟೆಸ್ಟ್ ಮಾಡಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಹೇಳಿತ್ತು. ಈ ವೇಳೆ ಗಂಗೂಲಿ ದ್ರಾವಿಡ್ ಜೊತೆ ಚರ್ಚೆ ಮಾಡುವುದಾಗಿ ತಿಳಿಸಿದ್ದರು. ಹೀಗಾಗಿ ಈ ಇಬ್ಬರು ಗುರುವಾರ ಮುಂಬೈನಲ್ಲಿ ಚರ್ಚೆ ನಡೆಸಿದರು.
ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಉಭಯ ನಾಯಕರು ಹಲವು ವಿಚಾರಗಳ ಕುರಿತು ಮಾತುಕತೆ ಚರ್ಚಿಸಿದರು. ಈ ಚರ್ಚೆ ನಂತರ ದ್ರಾವಿಡ್ ಪ್ರತಿಕ್ರಿಯೆ ನೀಡದೆ ತೆರಳಿದ್ರೆ, ಎನ್ಸಿಎ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಗಂಗೂಲಿ ಹೇಳಿದ್ದಾರೆ.
ಗಂಗೂಲಿ ಹಿರಿಯ ಆಟಗಾರರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹೀಗಾಗಿ ಹಿರಿಯ ಕ್ರಿಕೆಟಿಗರೊಂದಿಗೆ ಸಿಎಸಿ ಬಗ್ಗೆ ಮಾತನಾಡಲು ಅನೌಪಚಾರಿಕವಾಗಿ ಕೇಳಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಎಸಿ ರಚನೆ ಯಾವಾಗ ಆಗುತ್ತೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ದೊರಕಿಲ್ಲ. ಇದೇ ವೇಳೆ ಏಷ್ಯಾ ಇಲೆವೆನ್ ತಂಡದ ಬಗ್ಗೆ ಪ್ರತಿಕ್ರಿಯೆ ನೀಡಲು ಗಂಗೂಲಿ ನಿರಾಕರಿಸಿದ್ದಾರೆ.