ETV Bharat / sports

ಸುನೀಲ್​ ನರೈನ್​ರನ್ನು 3 ಪಂದ್ಯಗಳಲ್ಲಿ ಆಡಿಸದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಕೋಚ್​ ಮೆಕಲಮ್​

author img

By

Published : Sep 1, 2020, 10:58 PM IST

ಸುನೀಲ್​ ನರೈನ್
ಸುನೀಲ್​ ನರೈನ್

ಅಪರೇಷನ್​ ಆದ ನಂತರ ವಿಶ್ರಾಂತಿ ತೆಗೆದುಕೊಂಡಿದ್ದ ನರೈನ್​ ಜಮೈಕಾ ವಿರುದ್ಧದ ಪಂದ್ಯದಲ್ಲಿ 11 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್​ ಸಹಿತ 29 ರನ್​ಗಳಿಸಿದ್ದಾರೆ.

ಟ್ರಿನಿಡಾಡ್​: ಮೊದಲೆರಡು ಪಂದ್ಯಗಳಲ್ಲಿ ಸತತ ಅರ್ಧಶತಕ ಹಾಗೂ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ನಂತರ ಅವರನ್ನು ಕೊನೆಯ ಮೂರು ಪಂದ್ಯಗಳಿಂದ ಹೊರಗಿಟ್ಟಿದ್ದಕ್ಕೆ ಮೆಕಲಮ್​ ಸ್ಪಷ್ಟನೆ ನೀಡಿದ್ದಾರೆ.

ಸುನೀಲ್​ ನರೈನ್​ ಕಿಡ್ನಿಯಲ್ಲಿದ್ದ ಕಲ್ಲುಗಳನ್ನು ತೆಗೆಸಲು ಆಸ್ಪತ್ರೆಗೆ ದಾಖಲಾಗಿದ್ದರು. ಆ ಕಾರಣದಿಂದ ಅವರು ಕಳೆದ ನಾಲ್ಕು ಪಂದ್ಯಗಳಿಗೆ ಅಲಭ್ಯರಾಗಿದ್ದರು ಎಂದು ಕೆಕೆಆರ್​ ಹಾಗೂ ಟಿಕೆಆರ್​ ಮುಖ್ಯ ಕೋಚ್​ ಆಗಿರುವ ಬ್ರೆಂಡನ್​ ಮೆಕಲಮ್​ ಬಹಿರಂಗಪಡಿಸಿದ್ದಾರೆ. ಜೊತೆಗೆ ಅವರು ಸಂಪೂರ್ಣ ಫಿಟ್ ಆಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ ಅವರಿಂದ ನಾವು ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಿದ್ದೇವೆ ಎಂದು ತಿಳಿಸಿದ್ದಾರೆ.

ನರೈನ್​ ಸಿಪಿಎಲ್​ ಮೊದಲ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ತೋರಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಆದರೆ ಅವರನ್ನು ಕಳೆದ ಮೂರು ಪಂದ್ಯಗಳಲ್ಲಿ ಆಡಿಸಿದಿದ್ದಕ್ಕೆ ಕಾರಣವನ್ನು ಬಹಿರಂಗಗೊಳಿಸದಿದ್ದದ್ದೂ ಟಿಕೆಆರ್​ ಅಭಿಮಾನಿಗಳಿಗಷ್ಟೇ ಅಲ್ಲದೆ ಕೆಕೆಆರ್​ನ ಅಭಿಮಾನಿಗಳಿಗೂ ಆಘಾತವನ್ನುಂಟು ಮಾಡಿತ್ತು. ಆದರೆ ಮಂಗಳವಾರ ನಡೆಯುತ್ತಿರುವ ಜಮೈಕಾ ವಿರುದ್ಧದ ಪಂದ್ಯದಲ್ಲಿ ನರೈನ್​ ಕಣಕ್ಕಿಳಿದಿದ್ದನ್ನು ನೋಡಿ ಅಭಿಮಾನಿಗಳು ಸಮಾಧಾನಪಟ್ಟುಕೊಂಡಿದ್ದಾರೆ.

ಅಪರೇಷನ್​ ಆದ ನಂತರ ವಿಶ್ರಾಂತಿ ತೆಗೆದುಕೊಂಡಿದ್ದ ನರೈನ್​ ಜಮೈಕಾ ವಿರುದ್ಧದ ಪಂದ್ಯದಲ್ಲಿ 11 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್​ ಸಹಿತ 29 ರನ್​ಗಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.