ETV Bharat / sports

IPL ನೀತಿ ಸಂಹಿತೆ ಉಲ್ಲಂಘಿಸಿದ ದಿನೇಶ್​ ಕಾರ್ತಿಕ್​.. ವಾಗ್ದಂಡನೆಗೆ ಗುರಿಯಾದ ಆರ್​ಸಿಬಿ ಪ್ಲೇಯರ್​!

author img

By

Published : May 27, 2022, 5:38 PM IST

IPL code of conduct
IPL code of conduct

ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ದಿನೇಶ್ ಕಾರ್ತಿಕ್​, ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಅಹಮದಾಬಾದ್​: ಇಂಡಿಯನ್​ ಪ್ರೀಮಿಯರ್ ಲೀಗ್​​ನಲ್ಲಿಂದು ಎರಡನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದ್ದು, ಗೆಲುವು ಸಾಧಿಸುವ ತಂಡ ಫೈನಲ್​​ಗೆ ಪ್ರವೇಶ ಪಡೆದುಕೊಳ್ಳಲಿದೆ. ಪಂದ್ಯ ಆರಂಭಗೊಳ್ಳುವುದಕ್ಕೂ ಕೆಲ ಗಂಟೆ ಬಾಕಿ ಇರುವಾಗಲೇ ಆರ್​ಸಿಬಿ ತಂಡಕ್ಕೆ ಕಹಿ ಸುದ್ದಿವೊಂದು ಎದುರಾಗಿದೆ.

ಲಖನೌ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್​​ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪಕ್ಕೊಳಗಾಗಿದ್ದಾರೆ. ಹೀಗಾಗಿ, ವಾಗ್ದಂಡನೆಗೆ ಗುರಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇಂಡಿಯನ್ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಭಾರತ ತಂಡದಲ್ಲಿ ಆಡುವುದು ನನ್ನ ಗುರಿ, ಅದಕ್ಕಾಗಿ ಸತತ ಪ್ರಯತ್ನ: ದಿನೇಶ್ ಕಾರ್ತಿಕ್

ಎಲಿಮಿನೇಟರ್ ಪಂದ್ಯದ ವೇಳೆ ಈ ಘಟನೆ ನಡೆದಿದ್ದು, ದಿನೇಶ್ ಕಾರ್ತಿಕ್​ ಪಂದ್ಯದ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ಆರ್ಟಿಕಲ್​ 2.3ರ ಹಂತ 1 ಉಲ್ಲಂಘನೆ ಮಾಡಿದ್ದು, ಈ ಅಪರಾಧಗಳಲ್ಲಿ ಮ್ಯಾಚ್​ ರೆಫರಿಯ ತೀರ್ಮಾನವೇ ಅಂತಿಮ ಎಂದು ತಿಳಿಸಿದೆ. ಕಾರ್ತಿಕ್ ಕೂಡ ತಾವು ಮಾಡಿರುವ ತಪ್ಪು ಒಪ್ಪಿಕೊಂಡಿದ್ದಾರೆ.​

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ದಿನೇಶ್ ಕಾರ್ತಿಕ್​, ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಪಾಟಿದಾರ್ ಜೊತೆ ಉತ್ತಮ ಜೊತೆಯಾಟವಾಡಿದ್ದರು. ಇವರ ಪ್ರದರ್ಶನದಿಂದಾಗಿ ಬಿಸಿಸಿಐ ಆಯ್ಕೆ ಮಂಡಳಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಚಾನ್ಸ್ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.