ETV Bharat / sports

ವಿರಾಟ್​ ಕೊರಳಲ್ಲಿ ರುದ್ರಾಕ್ಷಿ ಸರ, ಭಸ್ಮ ಆರತಿಯಲ್ಲಿ ವಿರುಷ್ಕಾ ಭಾಗಿ.. ಮಹಾಕಾಳೇಶ್ವರನ ದರ್ಶನ ಪಡೆದ ದಂಪತಿ

author img

By

Published : Mar 4, 2023, 10:08 AM IST

Actor Anushka Sharma and Cricketer Virat Kohli  Virat Kohli visit Mahakaleshwar temple in Ujjain  Anushka Sharma visit Mahakaleshwar temple  Cricketer Virat Kohli news  Actor Anushka Sharma news  ವಿರಾಟ್​ ಕೊರಳಲ್ಲಿ ರುದ್ರಾಕ್ಷಿ ಸರ  ಭಸ್ಮ ಆರತಿಯಲ್ಲಿ ವಿರುಷ್ಕಾ ಭಾಗಿ  ಮಹಾಕಾಳೇಶ್ವರನ ದರ್ಶನ ಪಡೆದ ದಂಪತಿ  ಮಧ್ಯಪ್ರದೇಶ ಉಜ್ಜೈನಿಗೆ ಭೇಟಿ ನೀಡಿದ ವಿರುಷ್ಕಾ  ಭಸ್ಮ ಆರತಿಯಲ್ಲಿ ಭಾಗಿಯಾಗಿ ದರ್ಶನ ಪಡೆದ ದಂಪತಿ  ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್  ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ  ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ  ವಿರಾಟ್ ಕೊಹ್ಲಿ ಫಾರ್ಮ್  ಮೂರನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಸೋಲು  ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ
ವಿರಾಟ್​ ಕೊರಳಲ್ಲಿ ರುದ್ರಾಕ್ಷಿ ಸರ

ಮಧ್ಯಪ್ರದೇಶ ಉಜ್ಜೈನಿಗೆ ಭೇಟಿ ನೀಡಿದ ವಿರುಷ್ಕಾ.. ಭಸ್ಮ ಆರತಿಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆದ ದಂಪತಿ.. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​

ಉಜ್ಜಯಿನಿ(ಮಧ್ಯಪ್ರದೇಶ): ಇಂದು ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ ಅನುಷ್ಕಾ ಜೊತೆಗೆ ಉಜ್ಜಯಿನಿಯಲ್ಲಿರುವ ವಿಶ್ವವಿಖ್ಯಾತ ಬಾಬಾ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಬಾಬಾ ಮಹಾಕಾಳೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿ, ದರ್ಶನ ಪಡೆದರು.

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ತಮ್ಮ ಪತ್ನಿ ಮತ್ತು ಬಾಲಿವುಡ್ ನಟಿಯಾಗಿರುವ ಅನುಷ್ಕಾ ಶರ್ಮಾ ಜೊತೆ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಇಬ್ಬರೂ ಬೆಳಗಿನ ಜಾವ 3 ಗಂಟೆಗೆ ಮಹಾಕಾಳ್​ ಭಸ್ಮ ಆರತಿಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು. ಬಳಿಕ ದೇವರ ಆಶೀರ್ವಾದ ಪಡೆದರು. ದರ್ಶನದ ನಂತರ ಪತಿ-ಪತ್ನಿ ಇಬ್ಬರೂ ನಂದಿ ಸಭಾಂಗಣದಲ್ಲಿ ಕುಳಿತು ಮಹಾಕಾಳನನ್ನು ಆರಾಧಿಸಿದರು. ನಂತರ ಗರ್ಭಕ್ಕೆ ತೆರಳಿ ಮಹಾಕಾಳನ ಆಶೀರ್ವಾದ ಪಡೆದರು. ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಭಾಗವಹಿಸಲು ಇಂದೋರ್​ಗೆ ಆಗಮಿಸಿದ್ದರು. ಕಳೆದ ದಿನ ಆಸ್ಟ್ರೇಲಿಯಾ ವಿರುದ್ಧ ಪಂದ್ಯ ಸೋಲಿನ ಬಳಿಕ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

Actor Anushka Sharma and Cricketer Virat Kohli  Virat Kohli visit Mahakaleshwar temple in Ujjain  Anushka Sharma visit Mahakaleshwar temple  Cricketer Virat Kohli news  Actor Anushka Sharma news  ವಿರಾಟ್​ ಕೊರಳಲ್ಲಿ ರುದ್ರಾಕ್ಷಿ ಸರ  ಭಸ್ಮ ಆರತಿಯಲ್ಲಿ ವಿರುಷ್ಕಾ ಭಾಗಿ  ಮಹಾಕಾಳೇಶ್ವರನ ದರ್ಶನ ಪಡೆದ ದಂಪತಿ  ಮಧ್ಯಪ್ರದೇಶ ಉಜ್ಜೈನಿಗೆ ಭೇಟಿ ನೀಡಿದ ವಿರುಷ್ಕಾ  ಭಸ್ಮ ಆರತಿಯಲ್ಲಿ ಭಾಗಿಯಾಗಿ ದರ್ಶನ ಪಡೆದ ದಂಪತಿ  ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್  ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ  ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ  ವಿರಾಟ್ ಕೊಹ್ಲಿ ಫಾರ್ಮ್  ಮೂರನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಸೋಲು  ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ
ವಿರಾಟ್​ ಕೊರಳಲ್ಲಿ ರುದ್ರಾಕ್ಷಿ ಸರ

ಬಾಬಾ ಮಹಾಕಾಳ್​ಗೆ ಭೇಟಿ ನೀಡಿದ ವಿರುಷ್ಕಾ: ಭಾರತ ತಂಡ ಮತ್ತು ಆಸ್ಟ್ರೇಲಿಯಾ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿಯನ್ನು ನಡೆಸಲಾಗುತ್ತಿದ್ದು, ಅದರ ಮೂರನೇ ಟೆಸ್ಟ್ ಪಂದ್ಯವು ಇಂದೋರ್‌ನಲ್ಲಿ ಮಾರ್ಚ್ 1 ರಿಂದ ಪ್ರಾರಂಭವಾಗಿ ಮಾರ್ಚ್​ 3ರಂದು ಮುಕ್ತಾಯಗೊಂಡಿತು. ಈಗಾಗಲೇ ಸರಣಿಯಲ್ಲಿ ಭಾರತ ತಂಡ 2-1 ಮುನ್ನಡೆಯಲ್ಲಿದೆ. ಪಂದ್ಯ ಮುಗಿದ ಬಳಿಕ ಅನೇಕ ಆಟಗಾರರು ತಮ್ಮ ಪತ್ನಿಯರೊಂದಿಗೆ ಬಾಬಾ ಮಹಾಕಾಳೇಶ್ವರ ದರ್ಶನ ಪಡೆಯಲು ಬಂದಿದ್ದರು. ಇದರಲ್ಲಿ ಭಾರತೀಯ ಆಟಗಾರ ವಿರಾಟ್ ಕೊಹ್ಲಿ ದಂಪತಿ ಸಹ ಶನಿವಾರ ಭಾಗವಹಿಸಿದ್ದರು.

Actor Anushka Sharma and Cricketer Virat Kohli  Virat Kohli visit Mahakaleshwar temple in Ujjain  Anushka Sharma visit Mahakaleshwar temple  Cricketer Virat Kohli news  Actor Anushka Sharma news  ವಿರಾಟ್​ ಕೊರಳಲ್ಲಿ ರುದ್ರಾಕ್ಷಿ ಸರ  ಭಸ್ಮ ಆರತಿಯಲ್ಲಿ ವಿರುಷ್ಕಾ ಭಾಗಿ  ಮಹಾಕಾಳೇಶ್ವರನ ದರ್ಶನ ಪಡೆದ ದಂಪತಿ  ಮಧ್ಯಪ್ರದೇಶ ಉಜ್ಜೈನಿಗೆ ಭೇಟಿ ನೀಡಿದ ವಿರುಷ್ಕಾ  ಭಸ್ಮ ಆರತಿಯಲ್ಲಿ ಭಾಗಿಯಾಗಿ ದರ್ಶನ ಪಡೆದ ದಂಪತಿ  ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್  ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ  ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ  ವಿರಾಟ್ ಕೊಹ್ಲಿ ಫಾರ್ಮ್  ಮೂರನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಸೋಲು  ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ
ಮಹಾಕಾಳೇಶ್ವರನ ದರ್ಶನ ಪಡೆದ ದಂಪತಿ

ಶನಿವಾರ ಬೆಳಗ್ಗೆ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಜೊತೆಯಾಗಿ ಬಾಬಾ ಮಹಾಕಾಳೇಶ್ವರನ ಆಶೀರ್ವಾದ ಪಡೆಯಲು ದೇವಸ್ಥಾನಕ್ಕೆ ಆಗಮಿಸಿದ್ದರು. ಅಲ್ಲಿ ಅನುಷ್ಕಾ ಶರ್ಮಾ ಸರಳವಾದ ಸೀರೆಯನ್ನು ಧರಿಸಿದ್ದರು ಮತ್ತು ವಿರಾಟ್ ಕೊಹ್ಲಿ ಧೋತಿ, ಕೊರಳಲ್ಲಿ ರುದ್ರಾಕ್ಷಿಯ ಮಾಲೆ ಧರಿಸಿದ್ದರು. ಈ ಸಮಯದಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ನಂದಿಹಾಲ್‌ನಲ್ಲಿ ಕುಳಿತು ಭಗವಾನ್ ಮಹಾಕಾಲ್ ಭಸ್ಮ ಆರತಿಯನ್ನು ಆನಂದಿಸಿದರು. ಅಲ್ಲಿ ಅವರು ಬಾಬಾ ಮಹಾಕಾಳ್​ ಬಳಿ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು.

ಗರ್ಭಗುಡಿಯಲ್ಲಿ ಬಾಬಾ ಮಹಾಕಾಳ್​ ಪೂಜೆ-ಅಭಿಷೇಕ: ಬಾಬಾ ಮಹಾಕಾಳ್​ ಭಸ್ಮ ಆರತಿ ಮುಗಿದ ನಂತರ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮಹಾಕಾಳ್​ ದೇವರ ಗರ್ಭಗುಡಿಗೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಪೂಜೆಯನ್ನು ಮಹಾಕಾಳ್​ ದೇವಸ್ಥಾನದ ಅರ್ಚಕ ಪ್ರದೀಪ್ ಗುರು ನೆರವೇರಿಸಿದರು. ಇದಕ್ಕೂ ಮೊದಲು ಅನೇಕ ಭಾರತೀಯ ಕ್ರಿಕೆಟಿಗರು ಬಾಬಾ ಮಹಾಕಾಳೇಶ್ವರನ ದರ್ನಶ ಪಡೆಯಲು ಬಂದಿದ್ದರು.

ಇತ್ತೀಚೆಗೆ ಇಂದೋರ್‌ನಲ್ಲಿ ಟೆಸ್ಟ್ ಪಂದ್ಯ ಪ್ರಾರಂಭವಾಗುವ ಮೊದಲು, ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಮತ್ತು ಅಕ್ಷರ್ ಪಟೇಲ್ ಅವರ ಪತ್ನಿ ಮೇಹಾ ಅವರೊಂದಿಗೆ ಮಹಾಕಾಳೇಶ್ವರ್​ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು.

ಮಹಾಕಾಳೇಶ್ವರನ ದರ್ಶನಕ್ಕೆ ಭಕ್ತರ ದಂಡು: ವಿಶ್ವವಿಖ್ಯಾತ ಜ್ಯೋತಿರ್ಲಿಂಗ ಬಾಬಾ ಮಹಾಕಾಳ್​ ದೇವಾಲಯವೂ ಲಕ್ಷಾಂತರ ಕೋಟಿ ಭಕ್ತರ ವಿಶೇಷ ನಂಬಿಕೆಯ ಕೇಂದ್ರವಾಗಿದೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯ ಭಕ್ತರು ಶಿವನ ದರ್ಶನ ಪಡೆಯಲು ಬರುತ್ತಾರೆ. ಅದೇ ಅನುಕ್ರಮದಲ್ಲಿ ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಅವರೊಂದಿಗೆ ಇಲ್ಲಿಗೆ ಭೇಟಿ ನೀಡಿ ದರ್ಶನ ಪಡೆದರು. ಮದುವೆಯ ನಂತರ ಇದೇ ಮೊದಲ ಬಾರಿಗೆ ಇಬ್ಬರೂ ಒಟ್ಟಿಗೆ ಬಾಬಾ ಮಹಾಕಾಳೇಶ್ವರನ ಆಶೀರ್ವಾದ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ ಫಾರ್ಮ್ ಅಷ್ಟೊಂದು ವಿಶೇಷವಾಗಿಲ್ಲ. ಅವರು ಆಸ್ಟ್ರೇಲಿಯಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ಕಡಿಮೆ ರನ್​ ಗಳಿಸಿ ಟೀಕಾಕಾರರಿಗೆ ಗುರಿಯಾಗಿದ್ದಾರೆ. ನವೆಂಬರ್ 2019ರ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದೇ ಒಂದು ಶತಕ ಗಳಿಸಲು ಸಾಧ್ಯವಾಗಿಲ್ಲ. ಅವರ ಟೆಸ್ಟ್ ಶತಕಕ್ಕಾಗಿ ಭಾರತೀಯ ಅಭಿಮಾನಿಗಳು ಮೂರು ವರ್ಷಕ್ಕೂ ಹೆಚ್ಚು ಕಾಲದಿಂದ ಕಾಯುತ್ತಿರುವುದು ಗಮನಾರ್ಹ. ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಕೊನೆಯ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್​ 9ರಿಂದ ನಡೆಯಲಿದೆ.

ಓದಿ: ನಾಳೆ ಡಬ್ಲ್ಯೂಪಿಎಲ್​ ಆರಂಭ: ಬಾಲಿವುಡ್​ ತಾರೆಯರಿಂದ ಮನರಂಜನೆ.. ಉಚಿತ ವೀಕ್ಷಣೆಗೆ ಅವಕಾಶ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.