ಐಪಿಎಲ್ 2021: ಟಾಸ್​ ಗೆದ್ದ ಆರ್​ಸಿಬಿಯಿಂದ ಬ್ಯಾಟಿಂಗ್ ಆಯ್ಕೆ, ಹಸರಂಗ-ಕೆಎಸ್ ಭರತ್​ ಪದಾರ್ಪಣೆ

author img

By

Published : Sep 20, 2021, 7:18 PM IST

RCB won the toss and elected to bat first

ಈ ಪಂದ್ಯದಲ್ಲಿ ಶ್ರೀಲಂಕಾದ ಸ್ಟಾರ್​ ಆಲ್​ರೌಂಡರ್​ ವನಿಂದು ಹಸರಂಗ ಮತ್ತು ವಿಕೆಟ್​ ಕೀಪರ್ ಕೆಎಸ್​ ಭರತ್​ ಆರ್​ಸಿಬಿ ಪರ ಐಪಿಎಲ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಕೆಕೆಆರ್ ಪರ ವೆಂಕಟೇಶ್ ಅಯ್ಯರ್​ ಪದಾರ್ಪಣೆ ಮಾಡುತ್ತಿದ್ದಾರೆ.

ಅಬು ಧಾಬಿ: 2021 ಐಪಿಎಲ್​ನ 31ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್​ ಕೊಹ್ಲಿ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಟೂರ್ನಿಯಲ್ಲಿ ಆಡಿರುವ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲು ಕಂಡಿರುವ ಆರ್​ಸಿಬಿ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್​ 7 ಪಂದ್ಯಗಳಿಂದ 2 ಗೆಲುವು ಮತ್ತು 5 ಸೋಲುಗಳೊಂದಿಗೆ 7ನೇ ಸ್ಥಾನ ಪಡೆದುಕೊಂಡಿದೆ. ಆರ್​ಸಿಬಿ ಈ ಪಂದ್ಯವನ್ನು ಗೆದ್ದು ಪ್ಲೇ ಆಫ್​ ಹಂತಕ್ಕೆ ಮತ್ತಷ್ಟು ಹತ್ತಿರವಾಗುವ ಆಶಯದಲ್ಲಿದ್ದರೆ, ಕೆಕೆಆರ್ ಪ್ಲೇ ಆಫ್​ ದೃಷ್ಟಿಯಿಂದ ಉಳಿದೆಲ್ಲಾ ಪಂದ್ಯಗಳನ್ನು​ ಗೆಲ್ಲಲೇಬೇಕಿದೆ.

ಈ ಪಂದ್ಯದಲ್ಲಿ ಶ್ರೀಲಂಕಾದ ಸ್ಟಾರ್​ ಆಲ್​ರೌಂಡರ್​ ವನಿಂದು ಹಸರಂಗ ಮತ್ತು ವಿಕೆಟ್​ ಕೀಪರ್ ಕೆಎಸ್​ ಭರತ್​ ಆರ್​ಸಿಬಿ ಪರ ಐಪಿಎಲ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಕೆಕೆಆರ್ ಪರ ವೆಂಕಟೇಶ್ ಅಯ್ಯರ್​ ಪದಾರ್ಪಣೆ ಮಾಡುತ್ತಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕಾರ್ ಭರತ್, ಗ್ಲೇನ್ ಮ್ಯಾಕ್ಸ್​ವೆಲ್, ಎಬಿ ಡಿ ವಿಲಿಯರ್ಸ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸಚಿನ್ ಬೇಬಿ, ಕೈಲ್ ಜೇಮೀಸನ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್

ಕೋಲ್ಕತ್ತಾ ನೈಟ್​ ರೈಡರ್ಸ್: ಶುಭಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೀ), ಸುನೀಲ್ ನರೈನ್, ವೆಂಕಟೇಶ್ ಅಯ್ಯರ್, ಲಾಕಿ ಫ ಸನ್, ವರ್ಗ್ಯುಸನ್ ಚಕ್ರವರ್ತಿ, ಪ್ರಸಿಧ್ ಕೃಷ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.