ದುಬೈ(ಯುಎಇ): ಅಕ್ಟೋಬರ್ 17ರಿಂದ ಯುಎಇಯಲ್ಲಿ ಬಹುನೀರಿಕ್ಷಿತ ಐಸಿಸಿ ಟಿ-20 ವಿಶ್ವಕಪ್ ಆರಂಭಗೊಳ್ಳಲಿದ್ದು, ಅದಕ್ಕಾಗಿ ಟೀಂ ಇಂಡಿಯಾ ಪ್ಲೇಯರ್ಸ್ ಕಾತುರದಿಂದ ಕಾಯುತ್ತಿದ್ದಾರೆ. ಟೂರ್ನಿಯಲ್ಲಿ ಭಾಗಿಯಾಗುವ ಅವಕಾಶ ಪಡೆದುಕೊಂಡಿರುವ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ತಮ್ಮ ಇಂಗಿತ ಹೊರಹಾಕಿದ್ದಾರೆ.
ಟೀಂ ಇಂಡಿಯಾ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಜೊತೆ ಸೇರಿ ಮೈದಾನದಿಂದ ಆಚೆಗೆ ಸಿಕ್ಸರ್ ಸಿಡಿಸುವ ಇಂಗಿತವನ್ನ ಸೂರ್ಯಕುಮಾರ್ ಯಾದವ್ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎಲ್ಲರೂ ಸೇರಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸಲಿದ್ದೇವೆ ಎಂದಿದ್ದಾರೆ. ಟಿ-20 ವಿಶ್ವಕಪ್ಗೆ ಸಂಬಂಧಿಸಿದಂತೆ ರೋಹಿತ್ ಶರ್ಮಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು, ಅದಕ್ಕೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಈ ರೀತಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: T20 World Cup|2007ರ ಇತಿಹಾಸ ಮರುಸೃಷ್ಟಿಸಲು ಪ್ರತಿಯೊಬ್ಬರೂ ಪ್ರಯತ್ನಿಸಲಿದ್ದೇವೆ: ರೋಹಿತ್
ಟಿ-20 ವಿಶ್ವಕಪ್ಗೆ ಸಂಬಂಧಿಸಿದಂತೆ ರೋಹಿತ್ ಶರ್ಮಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು, "ಈ ವರ್ಷದ ಐಸಿಸಿ ಟಿ20 ವಿಶ್ವಕಪ್ನಲ್ಲೂ ನಾವು ಪ್ರತಿಯೊಬ್ಬರೂ ಇತಿಹಾಸವನ್ನು ಮರು ಸೃಷ್ಟಿಸುವುದಕ್ಕಾಗಿ ನಮ್ಮಿಂದಾಗುವುದನ್ನೆಲ್ಲಾ ಮಾಡಲಿದ್ದೇವೆ. ನಾವು ಅದಕ್ಕಾಗಿಯೇ ಇಲ್ಲಿಗೆ ಬಂದಿದ್ದೇವೆ. ಮತ್ತೊಮ್ಮೆ ಸಾಧಿಸೋಣ ಭಾರತ. ನಾನು ಇಲ್ಲಿಗೆ ಗೆಲ್ಲುವುದಕ್ಕೆ ಇದ್ದೇನೆ" ಎಂದು ಸ್ಫೂರ್ತಿದಾಯಕ ವಾಕ್ಯಗಳನ್ನು ರೋಹಿತ್ ಶರ್ಮಾ ಬರೆದುಕೊಂಡಿದ್ದಾರೆ.
- " class="align-text-top noRightClick twitterSection" data="
">
ಸೂರ್ಯಕುಮಾರ್ ಯಾದವ್ ಸದ್ಯ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದು, ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಕಳಪೆ ಬ್ಯಾಟಿಂಗ್ ಮುಂದುವರೆಸಿರುವ ಕಾರಣ ಅವರ ಆಯ್ಕೆಗೆ ಹೆಚ್ಚಿನ ಆಕ್ರೋಶ ಕೂಡ ವ್ಯಕ್ತವಾಗಿದೆ.