ಹೈದರಾಬಾದ್: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭ ಇದೇ ಮೊದಲ ಬಾರಿಗೆ ವರ್ಚುವಲ್ ಮಾದರಿಯಲ್ಲಿ ಜರಗುತ್ತಿದೆ.
ಕೋವಿಡ್-19 ಭೀತಿಯಿಂದ ರಾಷ್ಟ್ರಪತಿ ಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ ಪ್ರಶಸ್ತಿ ಸಮಾರಂಭ ಇದೇ ಮೊದಲ ಬಾರಿಗೆ ವರ್ಚುವಲ್ ಕಾರ್ಯಕ್ರಮದಲ್ಲಿ ನಡೆಯುತ್ತಿದೆ. ಈ ವೇಳೆ 5 ರಾಜೀವ್ ಗಾಂಧಿ ಖೇಲ್ ರತ್ನ ಸಹಿತ ಅರ್ಜುನ ಪ್ರಶಸ್ತಿ, ಧ್ಯಾನ್ಚಂದ್ ಹಾಗೂ ದ್ರೋಣಾಚಾರ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ.
ಭಾರತ ಕ್ರೀಡಾ ಇಲಾಖೆ ನೀಡುವ ಈ ಅತ್ಯುನ್ನತ ಪ್ರಶಸ್ತಿಗಳಿಗೆ 74 ಮಂದಿ ಭಾಜನರಾಗಿದ್ದಾರೆ. ಎಲ್ಲರಿಗೂ ಇಂದು ಬೆಳಿಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವರ್ಚುವಲ್ ಆಗಿ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಆದರೆ ಕೊರೊನಾ ಸೇರಿದಂತೆ ವಿವಿಧ ಕಾರಣಗಳಿಂದ 14 ಮಂದಿ ಕ್ರೀಡಾಪಟುಗಳು ಪ್ರಶಸ್ತಿ ಸಮಾರಂಭದಿಂದ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.
![ಪ್ರಶಸ್ತಿ ವಿಜೇತರು](https://etvbharatimages.akamaized.net/etvbharat/prod-images/8515338_bartholomew-henderson-1_2808newsroom_1598582154_464_2908newsroom_1598683683_253.jpg)
ಹಾಕಿ ದಂತಕತೆ ಧ್ಯಾನ್ಚಂದ್ ಅವರ ಜನ್ಮದಿನದಂದು ರಾಷ್ಟ್ರಪತಿ ಭವನದಲ್ಲಿ ಕ್ರೀಡಾಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸಂಪ್ರಾಯದಂತೆ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೋವಿಡ್ 19 ಭೀತಿಯಿಂದ ಈ ಪ್ರಶಸ್ತಿ ಸಮಾರಂಭವನ್ನು ಆನ್ಲೈನ್ ಕಾರ್ಯಕ್ರಮದ ಮೂಲಕ ನಡೆಸಲಾಗುತ್ತಿದೆ.
ಇದಕ್ಕಾಗಿ ಬೆಂಗಳೂರು, ಪುಣೆ, ಸೋನೆಪೇಟ್, ಚಂಡೀಗಡ್, ಕೋಲ್ಕತ್ತಾ, ಲಕ್ನೋ, ದೆಹಲಿ, ಮುಂಬೈ, ಭೂಪಾಲ್, ಹೈದರಾಬಾದ್ ಮತ್ತು ಇಟಾನಗರದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಎಲ್ಲಾ ಕ್ರೀಡಾಪಟುಗಳು ತಮ್ಮ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ಈ ಸ್ಥಳಗಳಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವೀಕರಿಸಿಲಿದ್ದಾರೆ.