ETV Bharat / state

ಅಖಂಡ ಶ್ರೀನಿವಾಸ್​ ಮನೆ ಮೇಲೆ ದಾಳಿಗೆ ಖಂಡನೆ: ಭೋವಿ ಸಮಾಜದಿಂದ ಪ್ರತಿಭಟನೆ

author img

By

Published : Aug 26, 2020, 5:23 PM IST

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಖಂಡಿಸಿ ಬಾಗಲಕೋಟೆಯ ಇಲಕಲ್​ ಪಟ್ಟಣದಲ್ಲಿ ಸಿದ್ದರಾಮೇಶ್ವರ ಭೋವಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಭೋವಿ ಸಮಾಜದಿಂದ ಪ್ರತಿಭಟನೆ
ಭೋವಿ ಸಮಾಜದಿಂದ ಪ್ರತಿಭಟನೆ

ಬಾಗಲಕೋಟೆ: ಕೆ.ಜಿ.ಹಳ್ಳಿ ಪ್ರಕರಣದಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ, ಬೆಂಕಿ‌ ಹಚ್ಚಿ‌ ಆಸ್ತಿಹಾನಿ ಮಾಡಲಾಗಿದೆ. ಈ ಘಟನೆಯನ್ನು ಖಂಡಿಸಿ ಇಲಕಲ್​ ಪಟ್ಟಣದಲ್ಲಿ ಸಿದ್ದರಾಮೇಶ್ವರ ಭೋವಿ(ವಡ್ಡರ್) ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಲಕಲ್​ ಪಟ್ಟಣದ ಕಂಠಿ ವೃತ್ತದಿಂದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ಅವರು, ಕೃತ್ಯ ಎಸಗಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು.

ಬಳಿಕ ತಮ್ಮ ವಿವಿಧ ಬೇಡಿಕೆ ಇರುವ ಮನವಿ ಪತ್ರವನ್ನು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಮುಖ್ಯಸ್ಥರು, ನಗರ ಸಭೆ ಸದಸ್ಯರು ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.