ಬಾಗಲಕೋಟೆ: ಸಾರ್ವಜನಿಕವಾಗಿ ವಕೀಲೆ ಮೇಲೆ ಹಲ್ಲೆ

author img

By

Published : May 14, 2022, 9:27 PM IST

Updated : May 16, 2022, 3:20 PM IST

Assault on Lawyer in a public place

ಬಾಗಲಕೋಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ವಕೀಲೆ​ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್​ನಲ್ಲಿ ಚಿತ್ರಿಕರಿಸಲಾಗಿದೆ. ಹಲ್ಲೆಗೊಳಗಾದ ಸಂಗೀತಾ ಎಂಬುವವರು ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಬಾಗಲಕೋಟೆ: ನಡುರಸ್ತೆಯಲ್ಲಿ ವಕೀಲೆ ಮೇಲೆ ಹಲ್ಲೆ ಮಾಡಿದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ. ಸಾರ್ವಜನಿಕರ ಎದುರಲ್ಲೆ ಮಹಿಳೆ ಅಂತ ನೋಡದೇ ವ್ಯಕ್ತಿಯೊಬ್ಬ ಒದೆಯುತ್ತಿರುವ ದೃಶ್ಯ ಮೊಬೈಲ್​ದಲ್ಲಿ ಸೆರೆ‌ ಹಿಡಿಯಲಾಗಿದೆ. ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಅವರ ಪತಿ ಮೇಲೆ‌ ಮಾರಣಾಂತಿಕ‌ ಹಲ್ಲೆ ಮಾಡಲಾಗಿದೆ.

ವಕೀಲೆಯ ಮೇಲೆ ಬಾಗಲಕೋಟೆಯ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ಎಂಬಾತ ಹಲ್ಲೆ ಮಾಡಿದ್ದಾನೆ. ಕಾಲು, ಎದೆಭಾಗ, ತಲೆಗೆ ಪೆಟ್ಟಾಗಿದೆ‌ ಎಂದು ವಕೀಲೆ ಸಂಗೀತಾ ಆರೋಪಿಸಿದ್ದಾರೆ. ತನ್ನ ಪತಿಗೆ ಕಿವಿ ಹಾಗೂ ತಲೆಗೆ ಗಾಯವಾಗಿದೆ. ವಕೀಲೆ ಮತ್ತು ಪತಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜೆಪಿ ಮುಖಂಡ ರಾಜು ನಾಯ್ಕರ್ ಕುಮ್ಮಕ್ಕಿನಿಂದ ಮಹಾಂತೇಶ ಚೊಳಚಗುಡ್ಡ ಹಲ್ಲೆ ಮಾಡಿದ್ದಾನೆ ಎಂದು ವಕೀಲೆ ಆರೋಪ ಮಾಡಿದ್ದಾರೆ. ಬಿಜೆಪಿ ಮುಖಂಡ ರಾಜು ನಾಯ್ಕರ್ ಕಳೆದ ಮೇ 8ರಂದು‌ ನಸುಕಿನಜಾವ ಬುಲ್ಡೋಜರ್​​ನಿಂದ ಸಂಗೀತಾ ಮನೆಯ ಮುಂದಿನ ಕಾಂಪೌಂಡ್ ಹಾಗೂ ಶೌಚಾಲಯ ಕೆಡವಿದ್ದರು. ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದ್ದವು. ರಾಜು ನಾಯ್ಕರ್ ವಿರುದ್ಧ ಠಾಣೆಯಲ್ಲಿ ದೂರು ಕೊಟ್ಟಿದ್ದರಿಂದ ಮಹಾಂತೇಶ ಚೊಳಚಗುಡ್ಡ ಹಲ್ಲೆ ಮಾಡಿದ್ದಾನೆ ಆರೋಪ ಮಾಡಿದ್ದಾರೆ.

ಹಲ್ಲೆ ಮಾಡಿಲ್ಲ ಎಂದು ಮಹಾಂತೇಶ್ ಚೊಳಚಗುಡ್ಡ ಹೇಳಿದ್ದಾನೆ. ಆದರೆ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಮುಖಂಡ ರಾಜು ನಾಯ್ಕರ್ ಹಾಗೂ ನನಗೂ ಯಾವುದೇ ಸಂಬಂಧವಿಲ್ಲ. ನಿನ್ನೆ ಪೊಲೀಸರು ಬಂದಾಗ ಸಂಗೀತಾ ಶಿಕ್ಕೇರಿ ಅವರ ಮನೆ ಎಲ್ಲಿ ಎಂದಾಗ ತೋರಿಸಿದ್ದೆ. ನಮ್ಮ ಮನೆಯ ಹತ್ತಿರವೇ ಇರುವುದರಿಂದ ತೋರಿಸಿದ್ದೆ. ಅದೇ ದ್ವೇಷದ ಹಿನ್ನೆಲೆ ನಮ್ಮ ಅಂಗಡಿಗೆ ಬಂದು ನನ್ನ ಚಪ್ಪಲಿಯಿಂದ‌ ಹೊಡೆದು, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಮಹಾಂತೇಶ ಆರೋಪಿಸಿದ್ದಾನೆ.

ಬಾಗಲಕೋಟೆ: ಸಾರ್ವಜನಿಕವಾಗಿ ವಕೀಲೆ ಮೇಲೆ ಹಲ್ಲೆ

ವಕೀಲೆ ದೂರು ದಾಖಲಿಸಿದ್ದು, ಆರೋಪಿ ಮಹಾಂತೇಶ್ ಚೊಳಚಗುಡ್ಡನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಶರದ್​ ಪವಾರ್​ ಬಗ್ಗೆ ವಿವಾದಾತ್ಮಕ ಪೋಸ್ಟ್: ಮರಾಠಿ ನಟಿ ಪೊಲೀಸ್​ ವಶಕ್ಕೆ

Last Updated :May 16, 2022, 3:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.