ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ

author img

By

Published : Sep 9, 2022, 9:33 PM IST

Kn_Bgk_

ಕಳೆದ ಎರಡು ದಿನಗಳ ಹಿಂದೆ ಪಂಪ್​ಸೆಟ್​ ತರಲು ಹೋಗಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತ ದೇಹ ಪತ್ತೆಯಾಗಿದೆ.

ಬಾಗಲಕೋಟೆ: ವಿದ್ಯುತ್ ಪಂಪ್​ಸೆಟ್ ತರಲು ಹೋಗಿ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆಯಾಗಿದೆ.

ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ದೇವೇಂದ್ರ ಮೃತ ಯುವಕ. ದೇವೇಂದ್ರ ವಿದ್ಯುತ್ ಪಂಪ್​ಸೆಟ್ ತರಲು ಹೋದಾಗ, ನೀರಿನಲ್ಲಿ ಕೊಚ್ಚಿ ಹೋಗಿದ್ದ. ಕಳೆದ ಎರಡು ದಿನಗಳಿಂದ ಯುವಕನಿಗಾಗಿ ಜಿಲ್ಲಾಡಳಿತದ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಇಂದು ಯುವಕನ ಮೃತ ದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ದೊಡ್ಡನಗೌಡ ಪಾಟೀಲ್​ ಮೃತ ಯುವಕನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಯುವಕನ ಸಾವಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ನೀರು ತುಂಬಿದ ಕಲ್ಲು ಕ್ವಾರಿಯಲ್ಲಿ ಈಜಲು ಹೋದ ಯುವಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.