ಬಾಗಲಕೋಟೆಯಲ್ಲಿ ಕಾಂಟ್ರಾಕ್ಟರ್​ಗೆ ಐಟಿ ಶಾಕ್​.. ಡಿ.ವೈ. ಉಪ್ಪಾರ ಮನೆ ಮೇಲೆ ಅಧಿಕಾರಿಗಳ ದಾಳಿ

author img

By

Published : Oct 7, 2021, 2:41 PM IST

Updated : Oct 7, 2021, 3:41 PM IST

IT raid

ಮಾಜಿ ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ ಅವರಿಗೆ ಆಪ್ತ ಎನ್ನಲಾಗ್ತಿರುವ ಕಾಂಟ್ರಾಕ್ಟರ್ ಡಿ.ವೈ.ಉಪ್ಪಾರ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಾಗಲಕೋಟೆ: ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಬಿಜೆಪಿ ನಾಯಕರಿಗೆ ‌ಆಪ್ತ ಎನ್ನಲಾಗ್ತಿರುವ ಕಾಂಟ್ರಾಕ್ಟರ್ ಡಿ.ವೈ. ಉಪ್ಪಾರ ಅವರ ಮನೆ ಮೇಲೆ ಐಟಿ ದಾಳಿ ನಡೆದಿದೆ.

ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್​​ 69 ರಲ್ಲಿರುವ ಬಾಡಿಗೆ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ 6 ಜನ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಮನೆಯೊಳಗೆ ಇರುವ ಮ್ಯಾನೇಜರ್ ಸಹಿತ ಐದಾರು ಜನರ ವಿಚಾರಣೆ ನಡೆಸಿದ್ದು, ಕೆಲವು ಮಹತ್ತರ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇಬ್ಬರು ಪೊಲೀಸ್​​ ಸಿಬ್ಬಂದಿಯೊಡನೆ ಆಗಮಿಸಿದ ಅಧಿಕಾರಿಗಳು ಎಲ್ಲ ಕಡೆಗೆ ಪರಿಶೀಲನೆ‌ ನಡೆಸಿದ್ದಾರೆ.

ಡಿ.ವೈ. ಉಪ್ಪಾರ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದು, ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಯ ಸೇರಿದಂತೆ ಬೃಹತ್ ಕಾಮಗಾರಿಗಳಿಗೆ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಐಟಿ ದಾಳಿ: ಅಧಿಕಾರಿಗಳು ತಮ್ಮ ಕೆಲಸ ಮಾಡಿದ್ದಾರೆ- ಗೃಹ ಸಚಿವ ಆರಗ ಜ್ಞಾನೇಂದ್ರ

Last Updated :Oct 7, 2021, 3:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.