ETV Bharat / state

ಇದ್ದೊಬ್ಬ ಮಗನನ್ನು ಕೊಲೆ ಮಾಡಿ ಬಾವಿಗೆ ಎಸೆದ ದುರುಳರು... ಆಸ್ತಿಗಾಗಿ ಹತ್ಯೆ ಶಂಕೆ

author img

By

Published : May 12, 2020, 2:14 PM IST

ಪ್ರವೀಣ ಬಟ್ಟಲ್ (33) ಕೊಲೆಯಾದ ವ್ಯಕ್ತಿ. ಈತ ತನ್ನ ಪೋಷಕರ ಒಬ್ಬನೇ ಮಗನಾಗಿದ್ದನು. ಸೋಮವಾರ ಬಾವಿಯಲ್ಲಿ ಮೃತ ದೇಹ ತೇಲುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಸಿದ ನಂತರ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಆಸ್ತಿಗಾಗಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Murder
ಕೊಲೆಯಾದ ವ್ಯಕ್ತಿ

ಬಾಗಲಕೋಟೆ: ವ್ಯಕ್ತಿಯೊಬ್ಬನನ್ನು ಅಪಹರಿಸಿ, ಹಲ್ಲೆ ಮಾಡಿದ ಬಳಿಕ ಕೈ ಕಾಲು ಕಟ್ಟಿ ಬಾವಿಗೆ ಎಸೆದು ಕೊಲೆ ಮಾಡಿರುವ ಘಟನೆ ಮಹಾಲಿಂಗಪುರ ಪಟ್ಟಣದಲ್ಲಿ ಜರುಗಿದೆ.

ಪ್ರವೀಣ ಬಟ್ಟಲ್ (33) ಕೊಲೆಯಾದ ವ್ಯಕ್ತಿ. ಈತ ತನ್ನ ಪೋಷಕರ ಒಬ್ಬನೇ ಮಗನಾಗಿದ್ದನು. ಸೋಮವಾರ ಬಾವಿಯಲ್ಲಿ ಮೃತ ದೇಹ ತೇಲುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಸಿದ ನಂತರ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಆಸ್ತಿಗಾಗಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪಾಲಕರು ಮೊದಲು ಕಾಣೆಯಾಗಿರುವ ಬಗ್ಗೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೊಲೆ ಆಗಿರುವ ಬಗ್ಗೆ ಮಾಹಿತಿ ತಿಳಿದ ನಂತರ ಕೂಲೆಯ ಬಗ್ಗೆ ದೂರು ನೀಡಲಾಗಿದೆ. ಇನ್ನು ಹಲ್ಲೆ ಮಾಡಿ, ಕೈ ಕಾಲನ್ನು ಹಗ್ಗದಿಂದ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ದೇಹವನ್ನು ಸುತ್ತಿ ಬಾವಿಗೆ ಎಸೆದಿದ್ದು, ಮೂರು ದಿನದ ಬಳಿಕ ಮೃತದೇಹ ಪತ್ತೆಯಾಗಿದೆ.

ಇನ್ನು ಈ ಬಗ್ಗೆ ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.