ETV Bharat / state

ಸಾವಿನ ಮನೆಯಲ್ಲಿ ಸಿದ್ದರಾಮಯ್ಯ ರಾಜಕೀಯ; ಡಿಸಿಎಂ ಕಾರಜೋಳ

author img

By

Published : May 14, 2021, 7:13 PM IST

ಕೋವಿಡ್​ ಸಂಕ್ರಾಮಿಕ ಸಂದರ್ಭದಲ್ಲಿ ಯಾವ ರೀತಿ ಸಲಹೆ ಸೂಚನೆ ಸರ್ಕಾರಕ್ಕೆ ಕೂಡಬೇಕು ಎಂಬುದರ ಬಗ್ಗೆ ಸಿದ್ದರಾಮಯ್ಯ ಚಿಂತನೆ ಮಾಡಬೇಕು, ಅದು ಬಿಟ್ಟು ರಾಜಕಾರಣ ಮಾಡುವುದು ಬೇಡ. ರಾಜ್ಯದಲ್ಲಿ ಉಂಟಾಗುತ್ತಿರುವ ಸಾವು ನೋವುಗಳ ಸಂಖ್ಯೆ ತಪ್ಪಿಸುವಲ್ಲಿ ಸಹಕಾರ ನೀಡಲಿ, ಕೆಲಸ ಮಾಡಲಿ ಎಂದು ವಿಪಕ್ಷ ನಾಯಕ ಡಿಸಿಎಂ ಕಾರಜೋಳ ಸಲಹೆ ನೀಡಿದರು.

siddaramaih-is-doing-politics-in-death-house
ಡಿಸಿಎಂ ಕಾರಜೋಳ

ಬಾಗಲಕೋಟೆ: ಸಾವಿನ ಮನೆಯಲ್ಲಿಯೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ಸಾವಿನ ಮನೆಯಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡುತ್ತಿದ್ದಾರೆ: ಕಾರಜೋಳ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಇಡೀ ಮಾನವ ಕುಲಕ್ಕೆ ಸಂಕಷ್ಟ ಬಂದಿದೆ. ಇಂತಹ ಪರಿಸ್ಥಿತಿಯನ್ನು ಎಲ್ಲರೂ ಎದುರಿಸಬೇಕಾಗಿದೆ. ಈ ಸಂದರ್ಭದಲ್ಲಿ ಯಾವ ರೀತಿ ಸಲಹೆ ಸೂಚನೆ ಸರ್ಕಾರಕ್ಕೆ ಕೊಡಬೇಕು ಎಂಬುದರ ಬಗ್ಗೆ ಸಿದ್ದರಾಮಯ್ಯ ಚಿಂತನೆ ಮಾಡಬೇಕು, ಅದು ಬಿಟ್ಟು ರಾಜಕಾರಣ ಮಾಡುವುದು ಬೇಡ. ರಾಜ್ಯದಲ್ಲಿ ಉಂಟಾಗುತ್ತಿರುವ ಸಾವು ನೋವುಗಳ ಸಂಖ್ಯೆ ತಪ್ಪಿಸುವಲ್ಲಿ ಸಹಕಾರ ನೀಡಲಿ, ಕೆಲಸ ಮಾಡಲಿ ಎಂದು ಕಾರಜೋಳ ಸಲಹೆ ನೀಡಿದರು.

ಲಾಕ್​ಡೌನ್​ ಬಗ್ಗೆ ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ

ಕೊರೊನಾ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಲಾಕ್​ಡೌನ್ ಜಾರಿ ಮಾಡಬೇಕು ಎಂಬುದು ಐ​ಸಿಎಮ್​ಆರ್ ಸಲಹೆ. ಈ ಕುರಿತು ಮುಖ್ಯಮಂತ್ರಿಗಳು ನಿರ್ಣಯ ತೆಗೆದುಕೊಳ್ಳುತ್ತಾರೆ. ಲಾಕ್​ಡೌನ್ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ, ಅದಕ್ಕಿಂತ ಮುಂಚೆಯೇ ನಾನು ಹೇಳುವುದಕ್ಕೆ ಆಗಲ್ಲ ಎಂದರು.

ಲಸಿಕೆ ಕೊರತೆ ಬಗ್ಗೆ ಗೊತ್ತಿಲ್ಲ

ವ್ಯಾಕ್ಸಿನ್ ಕೊರತೆ ಬಗ್ಗೆ ಸಚಿವ ಸುಧಾಕರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರ ಹೇಳಿಕೆಯನ್ನು ನಾನು ನೋಡಿಲ್ಲ. ಅದು ತಪ್ಪು ನಿರ್ಧಾರವೂ ಅಲ್ಲ. ಈಗ 45 ವಯಸ್ಸಿನ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. 2ನೇ ಅಲೆಯಲ್ಲಿ ಯುವಕರು ಹೆಚ್ಚು ಬಲಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಹೆಚ್ಚಿನ ಆದ್ಯತೆ ಕೂಡಬೇಕಾಗಿದೆ. ಸಾರ್ವಜನಿಕರು ಎಚ್ಚರ ವಹಿಸಿ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.