ಬಾಗಲಕೋಟೆ: ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ನಡೆದಿದೆ. ಮಂಜುನಾಥ ಅಂಬಿಗೇರ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ ಎಂದು ತಿಳಿದು ಬಂದಿದೆ.
ಸಂಗಮೇಶ್ ಬಸವನಾಳ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಆಸ್ತಿ ವಿಭಜನೆ ಮಾಡಿ ಪಹಣಿ ಪತ್ರ ನೀಡಲು ಗ್ರಾಮ ಲೆಕ್ಕಾಧಿಕಾರಿ ಹಣಕ್ಕೆ ಬೇಡಿಕೆ ಇಟ್ಟಿದ್ದನಂತೆ. ನಾಲ್ಕು ಸಾವಿರ ಲಂಚ ಪಡೆಯುವ ವೇಳೆ ದಾಳಿ ಮಾಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿಯ ಬಳಿ ಇದ್ದ ಆರು ಸಾವಿರ ಸೇರಿ ಒಟ್ಟು ಹತ್ತು ಸಾವಿರ ರೂ.ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಎಸಿಬಿ ಡಿವೈಎಸ್ಪಿ ವೇಣುಗೋಪಾಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.