ಬಾಗಲಕೋಟೆ: ಈಜಲು ಹೋಗಿ ಇಬ್ಬರು ಬಾಲಕರು ಮೃತ

author img

By

Published : Oct 1, 2021, 5:37 PM IST

two-boys-died-after-falling-in-river-at-bagalkot

ಗ್ರಾಮದ ಬಳಿ ಹರಿಯುತ್ತಿದ್ದ ಮಲಪ್ರಭಾ ನದಿಗೆ ಬಾಲಕರು ಈಜಲು ಹೋಗಿದ್ದ ವೇಳೆ ದುರಂತ ಘಟಿಸಿದೆ.

ಬಾಗಲಕೋಟೆ: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೊಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.

two-boys-died-after-falling-in-river-at-bagalkot
ಬಾಲಕರ ಮೃತದೇಹ

ಮಲ್ಲಪ್ಪ (11) ಮತ್ತು ಮನೋಜ್ (10) ಮೃತ ಬಾಲಕರು. ಇವರು ಗ್ರಾಮದ ಬಳಿ ಹರಿಯುತ್ತಿದ್ದ ಮಲಪ್ರಭಾ ನದಿಗೆ ಈಜಲು ಹೋಗಿದ್ದರು. ಈ ಸಂದರ್ಭದಲ್ಲಿ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಪೊಲೀಸ್ ಸಿಬ್ಬಂದಿ ನೀರಿನಿಂದ ಹೊರ ತೆಗೆದಿದ್ದಾರೆ. ಗುಳೇದಗುಡ್ಡ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: IPL ಕ್ರಿಕೆಟ್ ಬೆಟ್ಟಿಂಗ್: ಬೆಂಗಳೂರಿನಲ್ಲಿ ಓರ್ವನ ಬಂಧನ, 15 ಲಕ್ಷ ರೂ.ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.