ಬಾಗಲಕೋಟೆ: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೊಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ (11) ಮತ್ತು ಮನೋಜ್ (10) ಮೃತ ಬಾಲಕರು. ಇವರು ಗ್ರಾಮದ ಬಳಿ ಹರಿಯುತ್ತಿದ್ದ ಮಲಪ್ರಭಾ ನದಿಗೆ ಈಜಲು ಹೋಗಿದ್ದರು. ಈ ಸಂದರ್ಭದಲ್ಲಿ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಪೊಲೀಸ್ ಸಿಬ್ಬಂದಿ ನೀರಿನಿಂದ ಹೊರ ತೆಗೆದಿದ್ದಾರೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: IPL ಕ್ರಿಕೆಟ್ ಬೆಟ್ಟಿಂಗ್: ಬೆಂಗಳೂರಿನಲ್ಲಿ ಓರ್ವನ ಬಂಧನ, 15 ಲಕ್ಷ ರೂ.ವಶ