ಬಾಗಲಕೋಟೆ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತ ಪಟ್ಟಿರುವ ಘಟನೆ ತುಳಸಿಗೇರಿ ಗ್ರಾಮದ ಸಮೀಪ ನಡೆದಿದೆ.
ನವನಗರದ ವಾಂಬೆ ಕಾಲೋನಿ ನಿವಾಸಿ ರಂಗಪ್ಪ ಸಾಬಣ್ಣ ಕಟ್ಟಿಮನಿ (29) ಹಾಗೂ ರಾಮದುರ್ಗ ತಾಲೂಕಿನ ಸಾಗರ ಲಮಾಣಿ (20) ಮೃತಪಟ್ಟವರು.
ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.