PFI, SDPI ಮುಖಂಡರ ಮನೆ ಮೇಲೆ ದಾಳಿ ನಡೆಸಿಲ್ಲ, ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ: ಸಿಎಂ

author img

By

Published : Sep 27, 2022, 7:40 PM IST

ಎಕ್ಸೈಡ್ ಕಂಪನಿ ಗುದ್ದಲಿ ಪೂಜೆ
ಎಕ್ಸೈಡ್ ಕಂಪನಿ ಗುದ್ದಲಿ ಪೂಜೆ ()

ಪಿಎಫ್​ಐ ಮತ್ತು ಎಸ್​ಡಿಪಿಐ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ನಡೆಸಿಲ್ಲ. ಬದಲಾಗಿ ಅವರು ಮುಂಜಾಗ್ರತಾ ಕ್ರಮಕೈಗೊಂಡಿದ್ದಾರೆ ಎಂದು ಸಿಎಂ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ರಾಜ್ಯದಲ್ಲಿ ಮಂಗಳವಾರ ಬೆಳಗ್ಗೆ ಪಿಎಫ್​ಐ ಮತ್ತು ಎಸ್​ಡಿಪಿಐ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಪೊಲೀಸರು ಮುಂಜಾಗ್ರತವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.

ದೇವನಹಳ್ಳಿ ತಾಲೂಕಿನ ಹರಳೂರಿನ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್​ನಲ್ಲಿ ನಿರ್ಮಾಣವಾಗಲಿರುವ, ಎಕ್ಸೈಡ್ ಕಂಪನಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದರು. ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಎಂ ಬಸವರಾಜು ಬೊಮ್ಮಾಯಿ

ಪೊಲೀಸರು PFI ಮತ್ತು SDPI ಮುಖಂಡರ ಮನೆ ಮೇಲೆ ದಾಳಿ ನಡೆಸಿಲ್ಲ. ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದಾರೆ. ಅದು ಕೂಡ ತಹಶೀಲ್ದಾರ್ ಮೂಲಕ ತೆಗೆದುಕೊಳ್ಳಲಾಗಿದೆ. ಹತ್ತು ಹಲವಾರು ಮಾಹಿತಿಗಳು ಪೊಲೀಸರಿಗೆ ಬಂದಿದೆ. ಹೀಗಾಗಿ ನಮ್ಮ ಕರ್ನಾಟಕ ಪೊಲೀಸರು ಕ್ರಮಕೈಗೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ದೇಶದೆಲ್ಲೆಡೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಎಷ್ಟು ಜನರನ್ನ ವಶಕ್ಕೆ ಪಡೆಯಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು, ನಾನು ಇನ್ನೂ ಪಡೆದುಕೊಂಡಿಲ್ಲ ಎಂದರು.

ಇದನ್ನೂ ಓದಿ: ವಿಜ್ಞಾನ ಅಧ್ಯಾತ್ಮಿಕತೆ ಒಂದೇ ನಾಣ್ಯದ ಎರಡು ಮುಖ.. ಅಧ್ಯಾತ್ಮಿಕತೆ ವಿಜ್ಞಾನಕ್ಕೆ ಸ್ಪೂರ್ತಿ ಎಂದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.